ಕಾರ್ಕಳ, ಜೂ.3: ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಪ್ರಾರಂಭೊತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಾಧನೆ ಹೆಜ್ಜೆ ಗುರುತುಗಳನ್ನು ದೃಶ್ಯಾಧಾರಿತವಾಗಿ ವಿಜ್ಞಾನ ಶಿಕ್ಷಕಿ ಅನಿಶಾರವರು ಪ್ರಸ್ತುತಪಡಿಸಿದರು. ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿದ ವೈದ್ಯಾಧಿಕಾರಿ ಶ್ರೀವಿದ್ಯಾ ಅವರು ಮಾತನಾಡಿ, ದೈಹಿಕ, ಮಾನಸಿಕ ಮತ್ತು ಸಾಮಾಜಿಕವಾಗಿ ಉತ್ತಮವಾಗಿರುವುದು ಆರೋಗ್ಯದ ಲಕ್ಷಣ. ಧ್ಯಾನ ವ್ಯಾಯಾಮಗಳ ಮೂಲಕ ಉತ್ತಮ ಆರೋಗ್ಯವನ್ನು ನಾವು ಪಡೆಯಬಹುದು.

ಜೀವನದಲ್ಲಿ ಒತ್ತಡಗಳು ಜಾಸ್ತಿಯಾದಾಗ ಆರೋಗ್ಯ ಹಾಳಾಗುತ್ತದೆ ಎಂದು ಹೇಳಿದರು. ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಉಪಪ್ರಾಂಶುಪಾಲೆಯಾಗಿರುವ ವಾಣಿ.ಕೆ ಇವರು ಶಾಲಾ ಶಿಸ್ತು ಹಾಗೂ ನಿಯಮಗಳು, ಇಡೀ ವರ್ಷದ ಶಾಲೆಯ ಆಗುಹೋಗುಗಳ ಬಗ್ಗೆ ವಿವರಿಸಿ, ಪ್ರಾಸ್ತಾವಿಕ ನುಡಿಗಳೊಂದಿಗೆ ನೆರೆದಿರುವ ಎಲ್ಲರನ್ನೂ ಸ್ವಾಗತಿಸಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿಇಒ ಹಾಗೂ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ದಿನೇಶ್ ಎಂ. ಕೊಡವೂರು 2026-27ರ ಶೈಕ್ಷಣಿಕ ವರ್ಷದ ಬಗ್ಗೆ ಶಾಲಾ ಮಾಹಿತಿಯನ್ನು ನೀಡಿದರು. ಜೆಇಎ ಸಂಯೋಜಕರಾದ ಸಂದೀಪ್ರವರು ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯ ಬಗ್ಗೆ ಮಾಹಿತಿಯನ್ನು ನೀಡಿದರು.
ವೇದಿಕೆಯಲ್ಲಿ ಸ್ಟೂಡೆಂಟ್ ಡೀನ್ ಅಕಾಡಮಿಕ್ಸ್ ಡಾ.ಮಿಥುನ್ ಯು ಉಪಸ್ಥಿತರಿದ್ದರು. ವಿದ್ಯಾರ್ಥಿಗಳನ್ನು ಚಂಡೆ ನಾದದೊಂದಿಗೆ, ಸುಗಂಧ ಜಲವನ್ನು ಚಿಮುಕಿಸಿ, ಪೆನ್ನು ನೀಡುವ ಮೂಲಕ ವಿಶೇಷವಾಗಿ ಸ್ವಾಗತಿಸಲಾಯಿತು. ವಿದ್ಯಾರ್ಥಿನಿ ಸಮೃದ್ಧಿ ಪೈ ಪ್ರಾರ್ಥಿಸಿ, ಸಹ ಶಿಕ್ಷಕಿ ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.




By
ForthFocus™