ಶಿರ್ವ, ಜೂ.೪: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ ಮತ್ತು ತಾಲೂಕು ಪಂಚಾಯತ್ ಕಾಪು ಇವರ ಜಂಟಿ ಆಶ್ರಯದಲ್ಲಿ, ಶಿರ್ವಾದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರಂಭಿಸಲಾದ ಸಮಗ್ರ ಕೃಷಿ ಸಮೂಹಗಳ ಜೀವನೋಪಾಯ ಸೇವಾ ಕೇಂದ್ರವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ, ಮಾಹಿತಿ ಕರಪತ್ರವನ್ನು ಬಿಡುಗಡೆ ಮಾಡಿದರು. ಬಳಿಕ, ಕೇಂದ್ರದ ಅಡಿಯಲ್ಲಿದ್ದ ಟ್ರ್ಯಾಕ್ಟರ್, ಟಿಲ್ಲರ್, ರೋಟವೇಟರ್, ಕಲ್ಟಿವೇಟರ್, ವೀಡ್ ಕಟರ್, ಹುಲ್ಲು ಕತ್ತರಿಸುವ ಯಂತ್ರ ಹಾಗೂ ಮಲ್ಲಿಗೆ ಗಿಡಗಳಿಗೆ ಔಷಧ ಸಿಂಪಡಿಸುವ ಯಂತ್ರೋಪಕರಣಗಳನ್ನು ಕಾಪು ತಾಲೂಕಿನ ‘ಶೃಂಗಾರ ಸಂಜೀವಿನಿ ಒಕ್ಕೂಟ’ಕ್ಕೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು.
ಕಾಪು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ವಿಜಯ್ ಕುಮಾರ್, ಶಿರ್ವ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ನಿಧೀಶ್ ಹೊಳ್ಳ, ಅಭಿವೃದ್ಧಿ ಅಧಿಕಾರಿ ಅನಂತಪದ್ಮನಾಭ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಜಯಶ್ರೀ, ಜಿಲ್ಲಾ ವ್ಯವಸ್ಥಾಪಕರಾದ ಸೌಮ್ಯ, ವಲಯ ಮೇಲ್ವಿಚಾರಕರಾದ ಶ್ರೀಮತಿ, ಲಕ್ಷ್ಮಿ ಹಾಗೂ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.




By
ForthFocus™