Friday, July 24, 2026
Friday, July 24, 2026

ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು: ಡಾ.ಸುಧಾಕರ್ ಶೆಟ್ಟಿ; ಸೇನೆಗೆ ಒಂದು ಲಕ್ಷ ರೂಪಾಯಿ ಹಸ್ತಾಂತರದ ಮೂಲಕ ಮಾಲಿಕೆ ಪ್ರಾರಂಭ

ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು: ಡಾ.ಸುಧಾಕರ್ ಶೆಟ್ಟಿ; ಸೇನೆಗೆ ಒಂದು ಲಕ್ಷ ರೂಪಾಯಿ ಹಸ್ತಾಂತರದ ಮೂಲಕ ಮಾಲಿಕೆ ಪ್ರಾರಂಭ

Date:

ಕಾರ್ಕಳ, ಜೂ.4: ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ನಮ್ಮ ವ್ಯಕ್ತಿತ್ವದೊಂದಿಗೆ ಜೋಡಿಸಿಕೊಂಡಾಗ ರಾಷ್ಟ್ರ ಮೊದಲು ಎಂಬ ಭಾವ ನಮ್ಮೊಳಗೆ ಮೊಳಗಲು ಸಾಧ್ಯವಿದೆ ಎಂದು ಕರ್ನಾಟಕ ವಿಧಾನ ಪರಿಷತ್‌ನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಅವರು ಅಜೆಕಾರಿನ ಪದ್ಮನಗರದ ಅಜೆಕಾರು ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆ ಹಾಗೂ ಅಜೆಕಾರ್ ಜ್ಞಾನಸುಧಾ ಪದವಿಪೂರ್ವ ಕಾಲೇಜು ಅರ್ಪಿಸುವ ತಿಂಗಳ ಸರಣಿ ಮಾಲಿಕೆ ‘ದೇಶಸುಧಾ’ವನ್ನು ಭಾರತೀಯ ಸೇನೆಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ಒಂದು ಲಕ್ಷ ರೂಪಾಯಿಯನ್ನು ಸಂಸ್ಥೆಯ ಎನ್.ಸಿ.ಸಿ ಲೆ. ಮಂಜುನಾಥ್ ಮುದೂರು ಅವರಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ದೇಶಸುಧಾದ ಮೊದಲ ಮಾಲಿಕೆಯಲ್ಲಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್‌ರವರು ‘ಬಾಗಲಕೋಟೆಯ ರಂಗಪ್ಪ ಆಲೂರರ ದೇಶಪ್ರೇಮ’ ಎಂಬ ವಿಷಯದ ಕುರಿತಂತೆ ಸಂಪನ್ಮೂಲ ವ್ಯಕ್ತಿಯಾಗಿ ರಂಗಪ್ಪ ಆಲೂರ ಯಶೋಗಾಥೆಯನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿಉಪಸ್ಥಿತರಿದ್ದ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರು ದೇಶಸುಧಾದ ಮಾರ್ಗದರ್ಶಕರು ಆಗಿರುವ

ಡಾ.ಸುಧಾಕರ್ ಶೆಟ್ಟಿಯವರು ಮಾತನಾಡಿ, ದೇಶಕ್ಕಾಗಿ ಹಗಲಿರುಳೆನ್ನದೆ ಶ್ರಮಿಸುತ್ತಿರುವ ವೀರ ಯೋಧರ ತ್ಯಾಗ ಸ್ಮರಣೀಯ. ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು. ಮುಂದಿನ ಪ್ರಜೆಗಳಾದ ಇಂದಿನ ಮಕ್ಕಳಿಗೆ ರಾಷ್ಟçಭಕ್ತಿಯ ಚೇತನವನ್ನು ಪ್ರೇರಣೆ ನೀಡಬೇಕೆನ್ನುವುದು ನಮ್ಮ ಆಶಯವಾಗಿದೆ. ವಿದ್ಯಾರ್ಥಿಗಳು ದೇಶಪ್ರೇಮಿಯಾಗಿ ಬೆಳೆಯುವಂತೆ ಮಾಡುವುದು ಶಿಕ್ಷಣ ಸಂಸ್ಥೆಗಳ ಕರ್ತವ್ಯವಾಗಿರುತ್ತದೆ. ಇದಕ್ಕೆ ಜ್ಞಾನಸುಧಾ ಸದಾ ಬದ್ಧವಾಗಿದೆ ಎಂದು ನುಡಿದರು. ಕಾರ್ಕಳ ಜ್ಞಾನಸುಧಾದಲ್ಲಿಯೂ ಸಂಸ್ಕೃತಿ, ಸಂಸ್ಕಾರ, ಸದ್ವಿಚಾರದ ಆಶಯದಡಿ ಪ್ರಸ್ತುತಗೊಳ್ಳುತ್ತಿರುವ ತಿಂಗಳ ಸರಣಿಮಾಲಿಕೆ ಮೌಲ್ಯಸುಧಾ ತನ್ನ ಸುವರ್ಣ ಸಂಚಿಕೆಯ ಹೊಸ್ತಿಲಿಗೆ ಕಾಲಿಟ್ಟಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳ ಬಹುದು.

ಟ್ರಸ್ಟಿಗಳಾದ ಅನಿಲ್ ಕುಮಾರ್ ಜೈನ್, ಸಿ.ಎ ನಿತ್ಯಾನಂದ ಪ್ರಭು, ವಿದ್ಯಾವತಿ ಎಸ್ ಶೆಟ್ಟಿ ಹಾಗೂ ಡಾ. ಗಗನ್ ಎಸ್ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರಾದ ಶಾಂತಿರಾಜ್ ಹೆಗ್ಡೆ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರುಗಳು ಸಹಿತ ಬೊಧಕ ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಆಂಗ್ಲಭಾಷಾ ಉಪನ್ಯಾಸಕಿ ದರ್ಶಿನಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!