Thursday, September 10, 2026
Thursday, September 10, 2026

ಒಳಕಾಡು ಸರ್ಕಾರಿ ಪ್ರಾಥಮಿಕ ಶಾಲೆ: ಎಲ್.ಕೆ.ಜಿ. ಉದ್ಘಾಟನೆ

ಒಳಕಾಡು ಸರ್ಕಾರಿ ಪ್ರಾಥಮಿಕ ಶಾಲೆ: ಎಲ್.ಕೆ.ಜಿ. ಉದ್ಘಾಟನೆ

Date:

ಉಡುಪಿ, ಜೂ.5: ಒಳಕಾಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೂತನವಾಗಿ ಆರಂಭಗೊಂಡ ಎಲ್.ಕೆ.ಜಿ. ತರಗತಿಯನ್ನು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೂ ಆಂಗ್ಲ ಮಾಧ್ಯಮ ಶಿಕ್ಷಣ ಕಲ್ಪಿಸುವ ನಿಟ್ಟಿನಲ್ಲಿ ಶಾಲೆಯಲ್ಲಿ ಎಲ್. ಕೆ. ಜಿ. ತರಗತಿಯನ್ನು ಆರಂಭಿಸಲಾಗಿದ್ದು, ಈ ಮೂಲಕ ಖಾಸಗಿ ಶಾಲೆಗೆ ಸರಿಸಮನಾಗಿ ಗುಣಮಟ್ಟದ ಶಿಕ್ಷಣ ಪ್ರಾಥಮಿಕ ಶಾಲೆಯಲ್ಲಿಯೇ ನೀಡಲು ಸಾಧ್ಯವಾಗಲಿದೆ ಎಂದರು.

ಶಾಲೆಯ ಹಳೆ ವಿದ್ಯಾರ್ಥಿ ಐ ಪಾಂಡುರಂಗ ಮಿತ್ತಂತಾಯ ಮುಖ್ಯ ಪ್ರಧಾನ ವ್ಯವಸ್ಥಾಪಕರು, ಕೆನರಾ ಬ್ಯಾಂಕ್, ಖಜಾನೆ ಕಚೇರಿ ಮುಂಬೈ ಇವರ ವಿಶೇಷ ಶಿಫಾರಸಿನ ಅಡಿ ಮಂಜೂರಾದ ಕೆನರಾ ಬ್ಯಾಂಕ್ ಸಿ.ಎಸ್.ಆರ್. ಅನುದಾನದಲ್ಲಿ ಎಲ್. ಕೆ. ಜಿ ತರಗತಿಗಳಿಗೆ ಮರದ ಪೀಠೋಪಕರಣಗಳನ್ನು ಬ್ಯಾಂಕ್ ವತಿಯಿಂದ ನೀಡಿದ್ದನ್ನು ಈ ಸಮಯದಲ್ಲಿ ಶಾಸಕರು ಸ್ಮರಿಸಿಕೊಂಡರು. ಕೆನರಾ ಬ್ಯಾಂಕ್ ವೃತ್ತ ಕಚೇರಿಯ ಪ್ರಧಾನ ವ್ಯವಸ್ಥಾಪಕ ಎಚ್. ಕೆ. ಗಂಗಾಧರ ರವರಿಗೆ ಶಾಸಕ ಯಶ್ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದರು.

ಕೆನರಾ ಬ್ಯಾಂಕಿನ ಡಿಜಿಎಂ ಮಹಾಮಾಯ ಪ್ರಸಾದ್ ರಾಯ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಯಲ್ಲಮ್ಮ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಡಾ. ವಿರೂಪಾಕ್ಷ (ಪ್ರಾಥಮಿಕ), ರಮೇಶ್ ಹೆಗ್ಡೆ (ಪ್ರೌಢ ಶಾಲೆ), ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಶೇಟ್, ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ಪೂರ್ಣಿಮಾ, ಪ್ರೌಢಶಾಲೆಯ ಕುಸುಮ, ಸಮಿತಿಯ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ...

ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10 ರಂದು ಮೂರು ಪ್ರದರ್ಶನ

ಉಡುಪಿ, ಸೆ.9: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ...

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...
error: Content is protected !!