Thursday, July 30, 2026
Thursday, July 30, 2026

ಒಳಕಾಡು ಸರ್ಕಾರಿ ಪ್ರಾಥಮಿಕ ಶಾಲೆ: ಎಲ್.ಕೆ.ಜಿ. ಉದ್ಘಾಟನೆ

ಒಳಕಾಡು ಸರ್ಕಾರಿ ಪ್ರಾಥಮಿಕ ಶಾಲೆ: ಎಲ್.ಕೆ.ಜಿ. ಉದ್ಘಾಟನೆ

Date:

ಉಡುಪಿ, ಜೂ.5: ಒಳಕಾಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೂತನವಾಗಿ ಆರಂಭಗೊಂಡ ಎಲ್.ಕೆ.ಜಿ. ತರಗತಿಯನ್ನು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೂ ಆಂಗ್ಲ ಮಾಧ್ಯಮ ಶಿಕ್ಷಣ ಕಲ್ಪಿಸುವ ನಿಟ್ಟಿನಲ್ಲಿ ಶಾಲೆಯಲ್ಲಿ ಎಲ್. ಕೆ. ಜಿ. ತರಗತಿಯನ್ನು ಆರಂಭಿಸಲಾಗಿದ್ದು, ಈ ಮೂಲಕ ಖಾಸಗಿ ಶಾಲೆಗೆ ಸರಿಸಮನಾಗಿ ಗುಣಮಟ್ಟದ ಶಿಕ್ಷಣ ಪ್ರಾಥಮಿಕ ಶಾಲೆಯಲ್ಲಿಯೇ ನೀಡಲು ಸಾಧ್ಯವಾಗಲಿದೆ ಎಂದರು.

ಶಾಲೆಯ ಹಳೆ ವಿದ್ಯಾರ್ಥಿ ಐ ಪಾಂಡುರಂಗ ಮಿತ್ತಂತಾಯ ಮುಖ್ಯ ಪ್ರಧಾನ ವ್ಯವಸ್ಥಾಪಕರು, ಕೆನರಾ ಬ್ಯಾಂಕ್, ಖಜಾನೆ ಕಚೇರಿ ಮುಂಬೈ ಇವರ ವಿಶೇಷ ಶಿಫಾರಸಿನ ಅಡಿ ಮಂಜೂರಾದ ಕೆನರಾ ಬ್ಯಾಂಕ್ ಸಿ.ಎಸ್.ಆರ್. ಅನುದಾನದಲ್ಲಿ ಎಲ್. ಕೆ. ಜಿ ತರಗತಿಗಳಿಗೆ ಮರದ ಪೀಠೋಪಕರಣಗಳನ್ನು ಬ್ಯಾಂಕ್ ವತಿಯಿಂದ ನೀಡಿದ್ದನ್ನು ಈ ಸಮಯದಲ್ಲಿ ಶಾಸಕರು ಸ್ಮರಿಸಿಕೊಂಡರು. ಕೆನರಾ ಬ್ಯಾಂಕ್ ವೃತ್ತ ಕಚೇರಿಯ ಪ್ರಧಾನ ವ್ಯವಸ್ಥಾಪಕ ಎಚ್. ಕೆ. ಗಂಗಾಧರ ರವರಿಗೆ ಶಾಸಕ ಯಶ್ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದರು.

ಕೆನರಾ ಬ್ಯಾಂಕಿನ ಡಿಜಿಎಂ ಮಹಾಮಾಯ ಪ್ರಸಾದ್ ರಾಯ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಯಲ್ಲಮ್ಮ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಡಾ. ವಿರೂಪಾಕ್ಷ (ಪ್ರಾಥಮಿಕ), ರಮೇಶ್ ಹೆಗ್ಡೆ (ಪ್ರೌಢ ಶಾಲೆ), ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಶೇಟ್, ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ಪೂರ್ಣಿಮಾ, ಪ್ರೌಢಶಾಲೆಯ ಕುಸುಮ, ಸಮಿತಿಯ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!