ಕಾಪು, ಜೂ.5: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಾಪು ಬಿಜೆಪಿ ರೈತ ಮೋರ್ಚಾ ವತಿಯಿಂದ “ವಿಶ್ವಾಸ, ಅಭಿವೃದ್ಧಿ ಮತ್ತು ಜನಕಲ್ಯಾಣದ 12 ವರ್ಷಗಳ” ಅಂಗವಾಗಿ ಜೂನ್ 5 ರಂದು ಪಾದೂರು ಚಂದ್ರನಗರದಲ್ಲಿ ಹಮ್ಮಿಕೊಳ್ಳಲಾದ “ಏಕ್ ಪೇಡ್ ಮಾಕೆ ನಾಮ್”ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ಕಾರ್ಯಕ್ರಮಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಚಾಲನೆ ನೀಡಿದರು.
ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷರಾದ ಕೃಷ್ಣ ಮಜೂರು, ಪ್ರಧಾನ ಕಾರ್ಯದರ್ಶಿಗಳಾದ ಕೇಶವ ಮೊಯಿಲಿ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿಗಳಾದ ಪ್ರವೀಣ್ ಶೆಟ್ಟಿ ಪಾಂಗಾಳ, ಮಹಿಳಾ ಮೋರ್ಚಾದ ಅಧ್ಯಕ್ಷರಾದ ನೀತಾ ಗುರುರಾಜ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾರ್ಯದರ್ಶಿಗಳಾದ ಪ್ರವೀಣ್ ಅಡ್ವೆ, ಶಿರ್ವ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸಂದೀಪ್ ರಾವ್, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.




By
ForthFocus™