Saturday, June 6, 2026
Saturday, June 6, 2026

ಸಂತೆಕಟ್ಟೆ ಅಂಡರ್ ಪಾಸ್ ಪೂರಕ ಕಾಮಗಾರಿ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಸಂತೆಕಟ್ಟೆ ಅಂಡರ್ ಪಾಸ್ ಪೂರಕ ಕಾಮಗಾರಿ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

Date:

ಉಡುಪಿ, ಜೂ.5: ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಅಂಡರ್ ಪಾಸ್ ಬಸ್ ಶೆಲ್ಟರ್ ಸಹಿತ ಪೂರಕ ಕಾಮಗಾರಿಗಳ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ನಗರಸಭೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ ಪೂರ್ಣಗೊಂಡು ವಾಹನ ಸಂಚಾರ ಆರಂಭವಾಗಿದ್ದು, ಇನ್ನೂ ಹಲವಾರು ಪೂರಕ ಕಾಮಗಾರಿಗಳು ನಡೆಯಬೇಕಾಗಿದೆ. ಹೆದ್ದಾರಿಯ ಎರಡು ಬದಿಯಲ್ಲಿ ಬಸ್ ನಿಲ್ದಾಣ, ಶೌಚಾಲಯ, ಅಂಡರ್ ಪಾಸ್ ಸೇತುವೆ ಮೇಲೆ ಡಿವೈಡರ್ ಅಳವಡಿಕೆ, ತಡೆಗೋಡೆ ನಿರ್ಮಾಣ, ಸಂತೆಕಟ್ಟೆ ನೇಜಾರು ತಿರುವಿನಲ್ಲಿ ವೃತ್ತ ನಿರ್ಮಾಣ, ಎರಡೂ ಬದಿಯ ಸರ್ವೀಸ್ ರಸ್ತೆ ಆರಂಭಗೊಳ್ಳುವಲ್ಲಿ ಅಗಲೀಕರಣ, ಸರ್ವೀಸ್ ರಸ್ತೆಯ ಸುರಕ್ಷತಾ ಬೇಲಿ ವಿಸ್ತರಣೆ, ಸರ್ವೀಸ್ ರಸ್ತೆಯ ಬದಿಯಲ್ಲಿ ಇಂಟರ್ಲಾಕ್ ಅಳವಡಿಕೆ, ಆಶೀರ್ವಾದ್ ಲಕ್ಷ್ಮೀನಗರ ಜಂಕ್ಷನ್ ಅಗಲೀಕರಣ, ದಾರಿದೀಪ ಸಹಿತ ವಾಹನಗಳ ಸುಗಮ ಸಂಚಾರ, ಪಾದಚಾರಿಗಳ ಸುರಕ್ಷತಾ ದೃಷ್ಟಿಯಿಂದ ಅಗತ್ಯ ಕ್ರಮಗಳ ಬಗ್ಗೆ ತಕ್ಷಣ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕುಂದಾಪುರ ಭಾಗಕ್ಕೆ ತೆರಳುವ ಎಕ್ಸ್ ಪ್ರೆಸ್ ಬಸ್ಸುಗಳು ಸಂತೆಕಟ್ಟೆ ಜಂಕ್ಷನ್ ಗೆ ಬಾರದೆ ನೇರವಾಗಿ ಸಂಚರಿಸುವ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಬಸ್ಸುಗಳು ಸರ್ವೀಸ್ ರಸ್ತೆಯ ಮೂಲಕ ಸಂಚರಿಸುವಂತೆ ಕ್ರಮ ವಹಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಡುಪಿ ನಗರಸಭೆ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಸ್ಥಳೀಯ ಮುಖಂಡರಾದ ಉಮೇಶ್ ಶೆಟ್ಟಿ, ಕೃಷ್ಣ ದೇವಾಡಿಗ, ಸತೀಶ್ ನಾಯ್ಕ್, ಉದಯ, ಚಿನ್ಮಯ ಮೂರ್ತಿ, ರಾಮ ಪೂಜಾರಿ, ಪ್ರಸಾದ್ ರಾವ್, ಅಮಿತ್ ಪೂಜಾರಿ, ಬೈಕಾಡಿ ಸುಪ್ರಸಾದ್ ಶೆಟ್ಟಿ, ನಗರಸಭೆ ಪೌರಾಯುಕ್ತರಾದ ಮಹಾಂತೇಶ ಹಂಗರಗಿ, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾಪ್ರಸಾದ್, ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ: ಪ್ರೊ. ನಿತ್ಯಾನಂದ ವಿ. ಗಾಂವಕರ

ತೆಂಕನಿಡಿಯೂರು, ಜೂ.5: ವಿಶ್ವಸಂಸ್ಥೆಯ ಮುಂದಾಳತ್ವದಲ್ಲಿ ಆರಂಭವಾದ ವಿಶ್ವ ಪರಿಸರ ದಿನಾಚರಣೆಯು ಇಂದು...

ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಲ್ಲಿ ನೈಸರ್ಗಿಕ ಅನಿಲ ಪತ್ತೆ: ಕೇಂದ್ರ ಸಚಿವ ಹರ್ದೀಪ್ ಪುರಿ

ನವದೆಹಲಿ, ಜೂ.5: ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಿಂದ ಸುಮಾರು 15 ಕಿಲೋಮೀಟರ್...

ಕಾಪು: ಏಕ್ ಪೇಡ್ ಮಾ ಕೆ ನಾಮ್ ಕಾರ್ಯಕ್ರಮ

ಕಾಪು, ಜೂ.5: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಾಪು ಬಿಜೆಪಿ...

ಬದಲಾವಣೆ ನಮ್ಮಿಂದಲೇ: ಪರಿಸರ ಉಳಿಸುವತ್ತ ಒಂದು ಹೆಜ್ಜೆ

ಒಬ್ಬ ಸಮಾಜ ಕಾರ್ಯಕರ್ತನಾಗಿ, ಹಳ್ಳಿ ಹಳ್ಳಿಗಳಲ್ಲಿ ತಿರುಗಾಡುತ್ತಿರುವಾಗ, ರೋಗಿಗಳ ಬವಣೆಗಳನ್ನು ಕಾಣುವಾಗ,...
error: Content is protected !!