Thursday, July 23, 2026
Thursday, July 23, 2026

ಜ್ಞಾನಸುಧಾ: ಮೌಲ್ಯಸುಧಾ-49; ಬದುಕಿನಲ್ಲಿ ಶಿಸ್ತು ಮತ್ತು ಸ್ವಾವಲಂಬನೆ ಮುಖ್ಯ, ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿರಬೇಕು: ಡಾ. ವಿರೂಪಾಕ್ಷ ದೇವರಮನೆ

ಜ್ಞಾನಸುಧಾ: ಮೌಲ್ಯಸುಧಾ-49; ಬದುಕಿನಲ್ಲಿ ಶಿಸ್ತು ಮತ್ತು ಸ್ವಾವಲಂಬನೆ ಮುಖ್ಯ, ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿರಬೇಕು: ಡಾ. ವಿರೂಪಾಕ್ಷ ದೇವರಮನೆ

Date:

ಗಣಿತನಗರ, ಜೂ.11: ಪ್ರತಿದಿನ ನಿಮಗೊಂದು ಹೊಸ ಅವಕಾಶ ಸಿಗುತ್ತದೆ. ಆ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ. ಕಷ್ಟಗಳು ನಮ್ಮನ್ನು ಬೆಳೆಸಿದಷ್ಟು, ಸುಖ ನಮ್ಮನ್ನು ಬೆಳೆಸುವುದಿಲ್ಲ. ನಮ್ಮ ಭಾವನೆಗಳನ್ನು ಹಂಚಿಕೊಳ್ಳಬೇಕು. ನಮ್ಮ ಬದುಕಿನ ಮಹಾದುದ್ದೇಶ ಎದುರಿಗೆ ಇದ್ದಾಗ ನಮಗೆ ಎದುರಾಗುವ ಸಮಸ್ಯೆಗಳು ನಗಣ್ಯ. ನಾವು ಕಲಿತಂತ ವಿದ್ಯೆ ಮನುಕುಲದ ಒಳಿತಿಗಾಗಿ ಬಳಕೆಯಾಗಬೇಕು. ನಾವು ನಮ್ಮ ಊರಿಗೆ ಒಳ್ಳೆಯ ಕೊಡುಗೆ ಆಗಬೇಕು. ನಾವು ನಿನ್ನೆ ಮತ್ತು ನಾಳೆಯ ಬಗ್ಗೆ ಹೆಚ್ಚೆಚ್ಚು ಯೋಚನೆ ಮಾಡಿ ತೊಂದರೆಗೊಳಗಾಗುತ್ತಿದ್ದೇವೆ. ಇವತ್ತಿನ ದಿನ ನಿಮ್ಮ ಕೈಯಲ್ಲಿದೆ ಎಂದು ಉಡುಪಿಯ ಮನಃಶಾಸ್ತ್ರಜ್ಞರು ಹಾಗೂ ಲೇಖಕರಾದಂತಹ ಡಾ. ವಿರೂಪಾಕ್ಷ ದೇವರಮನೆ ನುಡಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ- 49ರಲ್ಲಿ “ಈ ದಿನ ನಿನದೇ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದಂತಹ ಡಾ. ಸುಧಾಕರ ಶೆಟ್ಟಿ, ಟ್ರಸ್ಟಿಗಳಾದಂತಹ ಅನಿಲ್ ಕುಮಾರ್ ಜೈನ್, ಸಿ.ಎ ನಿತ್ಯಾನಂದ ಪ್ರಭು, ಸಿ.ಇ.ಒ ಹಾಗೂ ಪ್ರಾಂಶುಪಾಲರು ದಿನೇಶ್ ಎಂ ಕೊಡವೂರು, ಉಪಪ್ರಾಂಶುಪಾಲರಾದ ಸಾಹಿತ್ಯ ಹಾಗೂ ಕೌನ್ಸಿಲರ್ ಡಾ. ಪ್ರಸನ್ನ ಹೆಗ್ಡೆ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಉಪನ್ಯಾಸಕರುಗಳಾದ ಸಂತೋಷ್ ನೆಲ್ಲಿಕಾರು ಪ್ರಾರ್ಥಿಸಿ, ವಿನಯಚಂದ್ರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!