Tuesday, June 16, 2026
Tuesday, June 16, 2026

ಅನಗತ್ಯ ರಸ್ತೆ ಅಗೆತ ಮಾಡಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಜಾರಿ

ಅನಗತ್ಯ ರಸ್ತೆ ಅಗೆತ ಮಾಡಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಜಾರಿ

Date:

ಉಡುಪಿ, ಜೂ.11: ಈಗಾಗಲೇ ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆ, ಉಡುಪಿ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಯಾವುದೇ ರಾಜ್ಯ ಹೆದ್ದಾರಿ/ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಹಾಗೂ ಅಕ್ಕಪಕ್ಕದಲ್ಲಿ ಅಗೆತ ಮಾಡುವುದನ್ನು ಅಕ್ಟೋಬರ್ ಅಂತ್ಯದವರೆಗೆ ನಿಷೇಧಿಸಲಾಗಿದೆ. ರಸ್ತೆ ಅಗೆತಕ್ಕೆ ಈಗಾಗಲೇ ಇಲಾಖೆಯಿಂದ ಅನುಮತಿ ನೀಡಲಾಗಿದ್ದರೂ ಸುರಕ್ಷತಾ ದೃಷ್ಠಿಯಿಂದ ಅಕ್ಟೋಬರ್ ಅಂತ್ಯದವರೆಗೆ ರಸ್ತೆ ಹಾಗೂ ರಸ್ತೆ ಬದಿಯಲ್ಲಿ ಯಾವುದೇ ಅಗೆತವನ್ನು ನಿಷೇಧಿಸಿದೆ ಮತ್ತು ಅಕ್ಟೋಬರ್ ಅಂತ್ಯದವರೆಗೆ ಯಾವುದೇ ಅನುಮತಿ ನೀಡಲಾಗುವುದಿಲ್ಲ. ಅನಗತ್ಯವಾಗಿ ರಸ್ತೆ ತುಂಡರಿಸುವುದು, ಅಗೆತ ಮಾಡುವುದು ಕಂಡುಬಂದಲ್ಲಿ ಅಂಥವಹ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ರವರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆಗುಂಬೆ ಘಾಟ್ ಕಾಮಗಾರಿಗೆ ಕೇಂದ್ರ ಸಿ.ಆರ್.ಐ.ಎಫ್ ನಿಂದ 15 ಕೋಟಿ ರೂ. ಮಂಜೂರಾತಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಜೂ.14: ಆಗುಂಬೆ ಘಾಟಿಯಲ್ಲಿ ವಾಹನಗಳ ಒತ್ತಡದಿಂದ ಟ್ರಾಫಿಕ್ ಜಾಮ್, ಕೆಲವು...

ಸಾಹಿತ್ಯದ ಕಾಲಘಟ್ಟ ಯಾವುದೇ ಇರಲಿ; ಓದಿನಲ್ಲಿ ಆತ್ಮವಿಶ್ವಾಸವಿರಲಿ: ಡಾ. ಪಿ.ಬಿ. ಪ್ರಸನ್ನ

ಉಡುಪಿ, ಜೂ.14: ಭಾಷಾ ಕಲಿಕೆಯ ಸಂದರ್ಭದಲ್ಲಿ ಶಿಕ್ಷಕ- ವಿದ್ಯಾರ್ಥಿಗಳಿಬ್ಬರಿಗೂ ಭಾಷೆಯ ಅರಿವಿನ...

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶ್ರೀ ಕೃಷ್ಣ ಮಠಕ್ಕೆ ಭೇಟಿ

ಉಡುಪಿ, ಜೂ.13: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶ್ರೀ ಕೃಷ್ಣ...
error: Content is protected !!