Sunday, August 30, 2026
Sunday, August 30, 2026

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

Date:

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ ಸಾಕಷ್ಟು ಸಮಸ್ಯೆಗಳನ್ನು ಈಗಾಗಲೇ ಎದುರಿಸುತ್ತಿದ್ದೇವೆ. ಪಂಚವರ್ಣದ ಹಸಿರು ಹೆಜ್ಜೆ ಶ್ಲಾಘನೀಯ ಪ್ರಯತ್ನವಾಗಿದೆ ಎಂದು ಕೋಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಅಭಿಪ್ರಾಯಪಟ್ಟರು. ಶುಕ್ರವಾರ ಕೋಡಿ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕೋಟದ ಪಂಚವರ್ಣ ಸಂಘಟನೆ, ಗೀತಾನಂದ ಫೌಂಡೇಶನ್ ಮಣೂರು ಮಾರ್ಗದರ್ಶನದಲ್ಲಿ ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಸಂಜೀವಿನಿ ಒಕ್ಕೂಟ ಕೋಡಿ ಪಂಚಾಯತ್, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಯೋಗದೊಂದಿಗೆ ಮೂರನೇ ವರ್ಷದ ಹಸಿರು ಹೆಜ್ಜೆ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಸಿರು ಹೆಜ್ಜೆ ಕಾರ್ಯಕ್ರಮದ ಸಂಯೋಜಕ ಪಂಚವರ್ಣದ ರವೀಂದ್ರ ಕೋಟ ಕಾರ್ಯಕ್ರಮದ ರೂಪುರೇಷೆಗಳನ್ನು ಸಭೆಗೆ ತಿಳಿಸಿದರು. ಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಗಿಡಗಳನ್ನು ನೆಡಲಾಯಿತು. ಇದೇ ವೇಳೆ ಪಿಡಿಒ ರವೀಂದ್ರ ರಾವ್ ಪ್ರತಿಜ್ಞಾ ವಿಧಿಯನ್ನು ಮಕ್ಕಳಿಗೆ ಬೋಧಿಸಿದರು. ಪಂಚವರ್ಣ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಸದಸ್ಯ ಕೇಶವ ಆಚಾರ್, ಕೋಡಿ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಪ್ರಭಾಕರ್ ಮೆಂಡನ್, ಗೀತಾ ಖಾರ್ವಿ, ಮಾಜಿ ಸದಸ್ಯರಾದ ಅಂತೋನಿ ಡಿಸೋಜ, ಕೃಷ್ಣ ಪೂಜಾರಿ ಪಿ., ಸತೀಶ್ ಕುಂದರ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಪೂರ್ಣಿಮಾ, ಎಂಬಿಕೆ ಅನಿತಾ, ಅಂಗನವಾಡಿ ಕಾರ್ಯಕರ್ತೆಯರಾದ ಯಮುನಾ ಎಲ್ ಕುಂದರ್, ಕೋಡಿಕನ್ಯಾನ ಪ್ರೀತಿ ಎಸ್., ಕೋಡಿ ಲೀಲಾವತಿ, ಕೋಡಿ ಶಾಲಾ ಮುಖ್ಯ ಶಿಕ್ಷಕಿ ಸಂಪಾ ಟೀಚರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!