Saturday, August 29, 2026
Saturday, August 29, 2026

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

Date:

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ ಉಡುಪಿ ಜಿಲ್ಲೆಯ ಒರ್ವ ಪತ್ರಕರ್ತರಿಗೆ ನೀಡುವ ‘ಯಶೋ ಮಾಧ್ಯಮ’ ಪ್ರಶಸ್ತಿಯನ್ನು ಈ ಬಾರಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ವಿಜಯ ಕರ್ನಾಟಕ ಉಡುಪಿ ಜಿಲ್ಲಾ ವರದಿಗಾರರಾದ ಸುಬ್ರಹ್ಮಣ್ಯ .ಜಿ ಕುರ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸ್ಪಂದನಾ ಸೇವಾ ಸಂಸ್ಥೆಯ ಖಜಾಂಚಿ ರಜನಿ ವಿ. ಪೈ ಹೇಳಿದರು. ಜೂನ್15 ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ಉಡುಪಿ ಜಿಲ್ಲೆಯ ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭದಲ್ಲಿ ‘ಯಶೋ ಮಾಧ್ಯಮ-2026’ ಪ್ರಶಸ್ತಿಯನ್ನು ವಿತರಿಸಲಾಗುವುದು ಎಂದು ಹೇಳಿದರು.

ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪತ್ರಕರ್ತರಾದ ಜನಾರ್ದನ್ ಕೊಡವೂರು, ಕಲ್ಯಾಣಪುರದ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ರಾಮರಾಯ ಕಿಣಿ, ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಆಡಳಿತಾಧಿಕಾರಿ ಸುಬ್ರಹ್ಮಣ್ಯ ಕಾರಂತ್, ಉದ್ಯಾನವನ ವಿನ್ಯಾಸಗಾರರಾದ ಲೋಕೇಶ್ ಪೂಜಾರಿ, ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್ ಸಹಾಯಕ ಪ್ರಾಧ್ಯಾಪಕರಾದ ಡಾ.ಮರಿಯಾ ಪಾಯಸ್, ಸ್ಪಂದನಾ ಸೇವಾ ಸಂಸ್ಥೆಯ ಖಜಾಂಚಿ ರಜನಿ ವಿ.ಪೈ, ಕಾರ್ಯದರ್ಶಿ ಸಂತೋಷ್ ಕಾಮತ್ ಉಪಸ್ಥಿತರಿರುವರು. ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿಯವರಿಗೆ ಸ್ಪಂದನಾ ಸೇವಾ ಸಂಸ್ಥೆಯಿಂದ ಗೌರವಿಸಲಾಗುವುದು ಎಂದು ರಜನಿ ವಿ. ಪೈ ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!