ಉಡುಪಿ, ಜೂ.16: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜೂ.19ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದೆ.
ಮುಖ್ಯ ಅತಿಥಿಯಾಗಿ ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಮ್ ಬಾಬು ಎಂ. ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ 30 ಗಿಡಗಳನ್ನು ನೆಡಲಾಗುತ್ತದೆ.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಲಿರುವರು. ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಸಂಘದ ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಂಕಿತ್ ಶೆಟ್ಟಿ ಭಾಗವಹಿಸಲಿರುವರು. ಬಳಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರ ಜೊತೆ ಸಂವಾದ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಸಂಘದ ಎಲ್ಲ ಸದಸ್ಯರು ಪಾಲ್ಗೊಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ತಿಳಿಸಿದ್ದಾರೆ.




By
ForthFocus™