Saturday, July 25, 2026
Saturday, July 25, 2026

ಜಿಲ್ಲಾ ರೆಡ್‌ಕ್ರಾಸ್ ಸಭಾಪತಿಗಳಾಗಿ ಡಾ..ಅಶೋಕ್ ಕುಮಾರ್ ಆಯ್ಕೆ

ಜಿಲ್ಲಾ ರೆಡ್‌ಕ್ರಾಸ್ ಸಭಾಪತಿಗಳಾಗಿ ಡಾ..ಅಶೋಕ್ ಕುಮಾರ್ ಆಯ್ಕೆ

Date:

ಉಡುಪಿ, ಜೂ.20: ರೆಡ್‌ಕ್ರಾಸ್ ಭವನದಲ್ಲಿ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಮುಂದಿನ ವಾರ್ಷಿಕ ಮಹಾಸಭೆಯವರೆಗೆ ಜಿಲ್ಲಾ ರೆಡ್‌ಕ್ರಾಸ್ ಸಭಾಪತಿಗಳಾಗಿ ವೈದ್ಯರಾದ ಡಾ. ಅಶೋಕ್ ಕುಮಾರ್ ವೈ.ಜಿ. ಅವರನ್ನು ನೇಮಕ ಮಾಡಲಾಯಿತು. ಕರ್ನಾಟಕ ರಾಜ್ಯ ರೆಡ್‌ಕ್ರಾಸ್‌ನ ಸಭಾಪತಿಗಳಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಜಿಲ್ಲಾ ಸಭಾಪತಿ ಸ್ಥಾನಕ್ಕೆ ಬಸ್ರೂರು ರಾಜೀವ್ ಶೆಟ್ಟಿ ಸಭಾಪತಿ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಅಂಗೀಕರಿಸಿದ ಆಡಳಿತ ಮಂಡಳಿಯು ಈ ನೇಮಕ ಮಾಡಿದೆ. ಡಾ.ಅಶೋಕ್ ಕುಮಾರ್ ವೈ.ಜಿಯವರು ಬಸ್ರೂರು ರಾಜೀವ್ ಶೆಟ್ಟಿ ಅವರಿಂದ ಸಭಾಪತಿಯಾಗಿ ಅಧಿಕಾರ ಸ್ವೀಕರಿಸಿದರು. ಅವರು ಕಳೆದ ಒಂದೂವರೆ ದಶಕದಿಂದ ಜಿಲ್ಲಾ ರೆಡ್‌ಕ್ರಾಸ್ ಆಡಳಿತ ಮಂಡಳಿಯ ಸದಸ್ಯರಾಗಿದ್ದರು. ಜಿಲ್ಲಾ ರೆಡ್‌ಕ್ರಾಸ್ಸಿನ ಉಪಸಭಾಪತಿಯಾಗಿ ಆಡಳಿತ ಮಂಡಳಿಯ ಸದಸ್ಯರಾದ ವಿ.ಜಿ. ಶೆಟ್ಟಿಯವರನ್ನು ಆಡಳಿತ ಮಂಡಳಿಯು ನೇಮಿಸಿ ಅವರು ಅಧಿಕಾರ ಸ್ವೀಕರಿಸಿದರು. ಸಭಾಪತಿಯಾಗಿ ಸೇವೆ ಸಲ್ಲಿಸಿ ಈಗ ಕರ್ನಾಟಕ ರಾಜ್ಯ ಸಭಾಪತಿಗಳಾಗಿರುವ ಬಸ್ರೂರು ರಾಜೀವ್ ಶೆಟ್ಟಿ ಅವರ ಸೇವೆಯನ್ನು ಆಡಳಿತ ಮಂಡಳಿ ಪ್ರಶಂಶಿಸಿದೆ. ಅವರು ಜಿಲ್ಲಾ ಆಡಳಿತ ಮಂಡಳಿ ಸದಸ್ಯರಾಗಿ ಮುಂದುವರಿಯುತ್ತಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!