Sunday, July 26, 2026
Sunday, July 26, 2026

ಕೋಟ: ಎಐ ತರಬೇತಿ ಕಾರ್ಯಾಗಾರ

ಕೋಟ: ಎಐ ತರಬೇತಿ ಕಾರ್ಯಾಗಾರ

Date:

ಕೋಟ, ಜೂ.21: ಜ್ಞಾನಕ್ಕೆ ಕೊನೆಯೆಂಬುದಿಲ್ಲ ಶಿಕ್ಷಕರಾದವರು ಜ್ಞಾನದ ಹರವುಗಳನ್ನು ಸದಾ ವಿಸ್ತರಿಸಿಕೊಳ್ಳಬೇಕು. ಆ ದಿಸೆಯಲ್ಲಿ ನಾವೀನ್ಯ ರೂಪದ ಶಿಕ್ಷಣವನ್ನು ಪಡೆಯಬೇಕಾದ ಅನಿವಾರ್ಯತೆ ಎಲ್ಲರಿಗೂ ಇದೆ. ಈ ದೃಷ್ಠಿಯಿಂದ ಎಐ ಇವತ್ತಿನ ಬಹು ಚರ್ಚೆಯ ವಿಷಯವಾಗಿದ್ದು ಆ ಕುರಿತು ನಾವು ಅದನ್ನು ಅರಿತುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಸಾಂಸ್ಕೃತಿಕ ಚಿಂತಕರಾದ ಇಬ್ರಾಹಿಂ ಸಾಹೇಬ್‌ ತಿಳಿಸಿದರು.

ಅವರು ಕಾರಂತ ಪ್ರತಿಷ್ಠಾನ ಕೋಟತಟ್ಟು ಗ್ರಾಮ ಪಂಚಾಯತ್‌, ನೆನಪು ಮೂವೀಸ್‌ ಮತ್ತು ಉಸಿರು ಕೋಟ ಆಶ್ರಯದಲ್ಲಿ ನಡೆದ ಎಐ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮುಖ್ಯ ಅಭ್ಯಾಗತರಾಗಿ ತರಬೇತುದಾರರಾದ ಮನೋಜ್‌ ಕಡಬ, ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕೆಂದು ನಲ್ನುಡಿಯ ಮಾತುಗಳನ್ನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿರುವ ವೀಣಾ ಸುರೇಶ್‌ ಎಐ ಕೃತಕ ಬುದ್ಧಿಮತ್ತೆಯ ಆಳ ಅಗತ್ಯತೆ ಅದನ್ನು ಅರಿಯುವ ವಿಚಾರ ಮತ್ತು ಅದರಲ್ಲಿರುವ ಹೊಸ ಸಾಧ್ಯತೆಗಳ ಬಗ್ಗೆ ಇಡೀ ದಿನ ತರಬೇತಿಯನ್ನು ನೀಡಿದರು. ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್‌ ಕೋಟರವರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಶೈಲಜಾ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!