Sunday, July 26, 2026
Sunday, July 26, 2026

ಬ್ರಹ್ಮಾವರ: ಕೃಷಿ ಸಖಿಯರ ಮೂರನೇ ಹಂತದ ತರಬೇತಿ ಕಾರ್ಯಕ್ರಮ ಸಂಪನ್ನ

ಬ್ರಹ್ಮಾವರ: ಕೃಷಿ ಸಖಿಯರ ಮೂರನೇ ಹಂತದ ತರಬೇತಿ ಕಾರ್ಯಕ್ರಮ ಸಂಪನ್ನ

Date:

ಬ್ರಹ್ಮಾವರ, ಜೂ.29: ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಇವರ ಆಶ್ರಯದಲ್ಲಿ ಕೃಷಿ ಸಖಿಯರಿಗಾಗಿ ಹಮ್ಮಿಕೊಳ್ಳಲಾಗಿದ್ದ ಮೂರನೇ ಹಂತದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜರುಗಿತು.

ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಕೃಷಿ ಸಖಿಯರಿಗೆ ಈ ಸಂದರ್ಭದಲ್ಲಿ ಪ್ರಮಾಣ ಪತ್ರಗಳನ್ನು ವಿತರಿಸಿ, ಅವರ ಮುಂದಿನ ಕೃಷಿ ಚಟುವಟಿಕೆಗಳಿಗೆ ಶುಭ ಹಾರೈಸಲಾಯಿತು. ಗ್ರಾಮೀಣ ಭಾಗದಲ್ಲಿ ಕೃಷಿ ತಂತ್ರಜ್ಞಾನ ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಪಸರಿಸುವಲ್ಲಿ ಕೃಷಿ ಸಖಿಯರ ಪಾತ್ರ ಮಹತ್ವದ್ದಾಗಿದೆ ಎಂದು ಕಾರ್ಯಕ್ರಮದಲ್ಲಿ ಆಶಯ ವ್ಯಕ್ತಪಡಿಸಲಾಯಿತು.

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಭೂಮಿಕಾ, ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕರಾದ ಅವಿನಾಶ್, ಕೃಷಿ ಯುವ ವೃತ್ತಿಪರರಾದ ರಂಜಿತ, ವಿಜ್ಞಾನಿಗಳಾದ ಸದಾನಂದ ಆಚಾರ್ಯ ಹಾಗೂ ಗೃಹ ವಿಜ್ಞಾನ ಪದವೀಧರರಾದ ವೀಣಾ ಶಾನುಭೋಗ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!