ಬ್ರಹ್ಮಾವರ, ಜೂ.29: ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಇವರ ಆಶ್ರಯದಲ್ಲಿ ಕೃಷಿ ಸಖಿಯರಿಗಾಗಿ ಹಮ್ಮಿಕೊಳ್ಳಲಾಗಿದ್ದ ಮೂರನೇ ಹಂತದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜರುಗಿತು.
ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಕೃಷಿ ಸಖಿಯರಿಗೆ ಈ ಸಂದರ್ಭದಲ್ಲಿ ಪ್ರಮಾಣ ಪತ್ರಗಳನ್ನು ವಿತರಿಸಿ, ಅವರ ಮುಂದಿನ ಕೃಷಿ ಚಟುವಟಿಕೆಗಳಿಗೆ ಶುಭ ಹಾರೈಸಲಾಯಿತು. ಗ್ರಾಮೀಣ ಭಾಗದಲ್ಲಿ ಕೃಷಿ ತಂತ್ರಜ್ಞಾನ ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಪಸರಿಸುವಲ್ಲಿ ಕೃಷಿ ಸಖಿಯರ ಪಾತ್ರ ಮಹತ್ವದ್ದಾಗಿದೆ ಎಂದು ಕಾರ್ಯಕ್ರಮದಲ್ಲಿ ಆಶಯ ವ್ಯಕ್ತಪಡಿಸಲಾಯಿತು.
ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಭೂಮಿಕಾ, ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕರಾದ ಅವಿನಾಶ್, ಕೃಷಿ ಯುವ ವೃತ್ತಿಪರರಾದ ರಂಜಿತ, ವಿಜ್ಞಾನಿಗಳಾದ ಸದಾನಂದ ಆಚಾರ್ಯ ಹಾಗೂ ಗೃಹ ವಿಜ್ಞಾನ ಪದವೀಧರರಾದ ವೀಣಾ ಶಾನುಭೋಗ್ ಉಪಸ್ಥಿತರಿದ್ದರು.




By
ForthFocus™