ಕಾಪು, ಜೂ.29: ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕುರಿತಾಗಿ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಸೋಮವಾರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಭೆ ನಡೆಸಿ ಚರ್ಚಿಸಿದರು.
ಶಾಸಕರು ಮಾತನಾಡಿ ವಿಶೇಷ ಸಮಗ್ರ ಪರಿಷ್ಕರಣೆ ಆರಂಭವಾಗಲಿದ್ದು ಅಧಿಕಾರಿಗಳು ಮನೆ ಮನೆ ತೆರಳಿದ್ದು ಈ ಸಂದರ್ಭದಲ್ಲಿ ಮತದಾರರಿಗೆ ಬೇಕಾದ ಸರಿಯಾದ ಮಾಹಿತಿ ಕೊಡುವ ಕೆಲಸ ನಮ್ಮಿಂದ ಆಗಬೇಕು ಎಂದರು.
ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಬಿ.ಎಲ್.ಎ – 1 ಸಂದೀಪ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಉಪಸ್ಥಿತರಿದ್ದರು.




By
ForthFocus™