Friday, July 3, 2026
Friday, July 3, 2026

ಸರಸ್ವತಿ ವಿದ್ಯಾಲಯದಲ್ಲಿ ದೃಷ್ಟಿ ಬಿಡುಗಡೆ

ಸರಸ್ವತಿ ವಿದ್ಯಾಲಯದಲ್ಲಿ ದೃಷ್ಟಿ ಬಿಡುಗಡೆ

Date:

ಗಂಗೊಳ್ಳಿ, ಜು.2: ಲೋಕ ದೃಷ್ಟಿ ಸಾಹಿತ್ಯದ ಮೂಲಸೆಲೆ. ಜೀವನಾನುಭವದಿಂದ ಲೋಕದೃಷ್ಟಿಯನ್ನು ಸಾಧ್ಯವಾಗಿಸಿಕೊಳ್ಳಬಹುದು. ಭಾಷೆ ಎಂಬುದು ಸಮೂಹದಿಂದ ಸಿದ್ಧಿಯಾಗುತ್ತದೆ. ಬದುಕನ್ನು ಪ್ರತಿಫಲಿಸಿದಾಗ ಯಾವುದೇ ಸಾಹಿತ್ಯವು ಮೌಲ್ಯಯುತವಾಗುತ್ತದೆ. ಹೆಚ್ಚಿನ ಓದು ನಮ್ಮ ಮನಸ್ಸುಗಳನ್ನು ಅರಳಿಸುತ್ತದೆ. ಕಲ್ಪನೆಗಳನ್ನು ಗರಿಗೆದರಿಸಿಕೊಂಡಾಗ ಸಾಹಿತ್ಯ ರಚನೆ ಸಾಧ್ಯ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರೂಪಿಸಿಕೊಳ್ಳುವುದಕ್ಕೆ ಬರವಣಿಗೆ ಸಶಕ್ತ ಮಾಧ್ಯಮವಾಗಿದೆ” ಎಂದು ಸಾಂಸ್ಕೃತಿಕ ಚಿಂತಕ ತಿಮ್ಮಪ್ಪ ಗುಲ್ವಾಡಿ ಹೇಳಿದರು. ಬುಧವಾರ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾರ್ಷಿಕ ಸಂಚಿಕೆ ‘ದೃಷ್ಟಿ’ ಬಿಡುಗಡೆ ಮಾಡಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ, ಕಾಲೇಜಿನ ಕಾರ್ಯದರ್ಶಿ ಎನ್. ಸದಾಶಿವ ನಾಯಕ್, ಸಂಪಾದಕ ಮಂಡಳಿಯ ಸದಸ್ಯ ನಾರಾಯಣ ಇ.ನಾಯ್ಕ್, ವಿದ್ಯಾರ್ಥಿನಿ ತನಿಷಾ ಉಪಸ್ಥಿತರಿದ್ದರು. ನಿರ್ವಾಹಕ ಸಂಪಾದಕ ಎಚ್. ಸುಜಯೀಂದ್ರ ಹಂದೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಭೂಮಿಕ ವಂದಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಸುಪ್ರೀತ ಆಚಾರ್ಯ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬ್ಲಾಕ್ ಕಾಂಗ್ರೆಸ್: ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆ

ಉಡುಪಿ, ಜು.2: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ, ಜು.2: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ...

ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

ಉಡುಪಿ, ಜು.2: ಕಲ್ಯಾಣ ಕ್ರಾಂತಿಯ ನಂತರ ನಶಿಸಿಹೋಗುತ್ತಿದ್ದ ಬಸವಣ್ಣ, ಅಲ್ಲಮಪ್ರಭು ಅಕ್ಕಮಹಾದೇವಿ...

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ, ಜು.2: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ...
error: Content is protected !!