Sunday, August 30, 2026
Sunday, August 30, 2026

ಸರಸ್ವತಿ ವಿದ್ಯಾಲಯದಲ್ಲಿ ದೃಷ್ಟಿ ಬಿಡುಗಡೆ

ಸರಸ್ವತಿ ವಿದ್ಯಾಲಯದಲ್ಲಿ ದೃಷ್ಟಿ ಬಿಡುಗಡೆ

Date:

ಗಂಗೊಳ್ಳಿ, ಜು.2: ಲೋಕ ದೃಷ್ಟಿ ಸಾಹಿತ್ಯದ ಮೂಲಸೆಲೆ. ಜೀವನಾನುಭವದಿಂದ ಲೋಕದೃಷ್ಟಿಯನ್ನು ಸಾಧ್ಯವಾಗಿಸಿಕೊಳ್ಳಬಹುದು. ಭಾಷೆ ಎಂಬುದು ಸಮೂಹದಿಂದ ಸಿದ್ಧಿಯಾಗುತ್ತದೆ. ಬದುಕನ್ನು ಪ್ರತಿಫಲಿಸಿದಾಗ ಯಾವುದೇ ಸಾಹಿತ್ಯವು ಮೌಲ್ಯಯುತವಾಗುತ್ತದೆ. ಹೆಚ್ಚಿನ ಓದು ನಮ್ಮ ಮನಸ್ಸುಗಳನ್ನು ಅರಳಿಸುತ್ತದೆ. ಕಲ್ಪನೆಗಳನ್ನು ಗರಿಗೆದರಿಸಿಕೊಂಡಾಗ ಸಾಹಿತ್ಯ ರಚನೆ ಸಾಧ್ಯ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರೂಪಿಸಿಕೊಳ್ಳುವುದಕ್ಕೆ ಬರವಣಿಗೆ ಸಶಕ್ತ ಮಾಧ್ಯಮವಾಗಿದೆ” ಎಂದು ಸಾಂಸ್ಕೃತಿಕ ಚಿಂತಕ ತಿಮ್ಮಪ್ಪ ಗುಲ್ವಾಡಿ ಹೇಳಿದರು. ಬುಧವಾರ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾರ್ಷಿಕ ಸಂಚಿಕೆ ‘ದೃಷ್ಟಿ’ ಬಿಡುಗಡೆ ಮಾಡಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ, ಕಾಲೇಜಿನ ಕಾರ್ಯದರ್ಶಿ ಎನ್. ಸದಾಶಿವ ನಾಯಕ್, ಸಂಪಾದಕ ಮಂಡಳಿಯ ಸದಸ್ಯ ನಾರಾಯಣ ಇ.ನಾಯ್ಕ್, ವಿದ್ಯಾರ್ಥಿನಿ ತನಿಷಾ ಉಪಸ್ಥಿತರಿದ್ದರು. ನಿರ್ವಾಹಕ ಸಂಪಾದಕ ಎಚ್. ಸುಜಯೀಂದ್ರ ಹಂದೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಭೂಮಿಕ ವಂದಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಸುಪ್ರೀತ ಆಚಾರ್ಯ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!