Sunday, August 30, 2026
Sunday, August 30, 2026

ಬಿ. ಬಿ. ಹೆಗ್ಡೆ ಕಾಲೇಜು: ಕೋಣಿ ಮಾನಸ ಜ್ಯೋತಿ ಶಾಲೆಗೆ ಬಿಸಿಎ ವಿದ್ಯಾರ್ಥಿಗಳ ಭೇಟಿ

ಬಿ. ಬಿ. ಹೆಗ್ಡೆ ಕಾಲೇಜು: ಕೋಣಿ ಮಾನಸ ಜ್ಯೋತಿ ಶಾಲೆಗೆ ಬಿಸಿಎ ವಿದ್ಯಾರ್ಥಿಗಳ ಭೇಟಿ

Date:

ಕುಂದಾಪುರ, ಜು.1: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಬಿಸಿಎ ವಿಭಾಗದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆ ಭಾಗವಾಗಿ ವಿದ್ಯಾರ್ಥಿಗಳು ಕೋಣಿಯ ಮಾನಸ ಜ್ಯೋತಿ ವಿಶೇಷ ಚೇತನ ಮಕ್ಕಳ ಶಾಲೆಗೆ ಭೇಟಿ ನೀಡಿದರು. ಶಾಲೆಯ ವಿಶೇಷ ಚೇತನ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮವನ್ನು, ಆಟೋಟಗಳನ್ನು ವಿದ್ಯಾರ್ಥಿಗಳು ನಡೆಸಿದರು. ವಿಶೇಷ ಚೇತನ ವಿದ್ಯಾರ್ಥಿಗಳು ತಮ್ಮ ವಿವಿಧ ಪ್ರತಿಭೆಯನ್ನು ತೋರ್ಪಡಿಸಿದರು. ಕೋಣಿಯ ಮಾನಸ ಜ್ಯೋತಿ ಟ್ರಸ್ಟ್ ಕೃಷ್ಣ ಶೋಭಾ ಮಧ್ಯಸ್ಥ, ಚೇತನ ಹಾಗೂ ಸಂಸ್ಥೆಯ ಮತ್ತಿತರ ಸಿಬ್ಬಂದಿಗಳು, ಕಾಲೇಜಿನ ಡೀನ್ ಅಕಾಡೆಮಿಕ್ ಗಿರಿರಾಜ್ ಭಟ್ ನೆಂಪು, ಸಹಾಯಕ ಪ್ರಾಧ್ಯಾಪಕ ಮಹೇಶ್ ಪೂಜಾರಿ, ಕಂಪ್ಯೂಟರ್ ಪ್ರೋಗ್ರಾಮರ್ ಆಕಾಶ್ ಭಂಡಾರಿ, ಮಂಜುನಾಥ್ ಕುಲಾಲ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!