Sunday, July 5, 2026
Sunday, July 5, 2026

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಾಜಿ ಪೊಲೀಸ್ ಆಯುಕ್ತ ಡಾ. ಸತ್ಯಪಾಲ್ ಸಿಂಗ್ ಭೇಟಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಾಜಿ ಪೊಲೀಸ್ ಆಯುಕ್ತ ಡಾ. ಸತ್ಯಪಾಲ್ ಸಿಂಗ್ ಭೇಟಿ

Date:

ಕಾಪು, ಜು.4: ಭಾರತ ಸರ್ಕಾರದ ಮಾನವ ಸಂಪನ್ಮೂಲ (ಉನ್ನತ ಶಿಕ್ಷಣ) ಮತ್ತು ಜಲಸಂಪನ್ಮೂಲ ಖಾತೆಯ ಮಾಜಿ ಸಚಿವ ಮತ್ತು ಮುಂಬೈನ ಮಾಜಿ ಪೊಲೀಸ್ ಆಯುಕ್ತ, ಗುರುಕುಲ ಕಾಂಗ್ರಿ ವಿಶ್ವವಿದ್ಯಾಲಯ ಹರಿದ್ವಾರದ ಕುಲಾಧಿಪತಿ ಡಾ. ಸತ್ಯಪಾಲ್ ಸಿಂಗ್ ಮತ್ತು ಪತ್ನಿ ಡಾ. ಅಲ್ಕಾ ಸಿಂಗ್ ಹಾಗೂ ರಿಷಿ ಪಲ್ಪು ಇವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರ್ಶನ ಪಡೆದರು.

ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.

ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ವ್ಯವಸ್ಥಾಪನ ಸಮಿತಿ ಸದಸ್ಯ ಶೇಕರ ಸಾಲ್ಯಾನ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜು.6: ಸಾಣೂರಿನಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಜನ್ಮದಿನಾಚರಣೆ

ಸಾಣೂರು, ಜು.5: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೈ...

ಸುಸ್ಥಿರ ನಾಳೆಗಾಗಿ ಜಲ ಮತ್ತು ವಿದ್ಯುತ್ ಸಂರಕ್ಷಣೆ

ಭೂಮಿ ಮತ್ತು ನಮ್ಮ ಭವಿಷ್ಯವನ್ನು ಸುರಕ್ಷಿತವಾಗಿಡಲು ಜಲ ಮತ್ತು ವಿದ್ಯುತ್ನ ಸಂರಕ್ಷಣೆ...

ಗ್ರಾಮ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜು.5: ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಗ್ರಾಮ ವೃತ್ತದ ಗ್ರಾಮಸಹಾಯಕರ ಹುದ್ದೆಗೆ...
error: Content is protected !!