ಬೈಂದೂರು, ಜು.4: ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಭೇಟಿ ಮಾಡಿ, ತಮ್ಮ ಕ್ಷೇತ್ರದ ವ್ಯಾಪ್ತಿಯ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಮನವಿ ಸಲ್ಲಿಸಿದರು.
ತುಂಗಾ ಏತ ನೀರಾವರಿ ಯೋಜನೆಯ ಆಧುನೀಕರಣ ಹಾಗೂ ಪ್ರವಾಹ ನಿಯಂತ್ರಣ ತಡೆಗೋಡೆ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದ ಸಂಸದರು, ಉಡುಗಣಿ-ತಾಳಗುಂದ ಸೇರಿದಂತೆ 8 ಪ್ರಮುಖ ಏತ ನೀರಾವರಿ ಯೋಜನೆಗಳ ಬಾಕಿ ವಿದ್ಯುತ್ ಬಿಲ್ ಪಾವತಿಗೆ ತುರ್ತು ಅನುದಾನ ಹಾಗೂ ನಿರಂತರ ವಿದ್ಯುತ್ ಸರಬರಾಜಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ಬೈಂದೂರು ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿರುವ ಸಿದ್ಧಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಪುನರಾರಂಭಿಸಲು ಸಂಸದರು ಪ್ರತ್ಯೇಕ ಮನವಿ ನೀಡಿದ್ದಾರೆ.
ಮನವಿಗೆ ಸ್ಪಂದಿಸಿದ ಸಚಿವರು, ರಾಜ್ಯದ ಅನ್ನದಾತರ ಹಿತರಕ್ಷಣೆ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ಈ ಎಲ್ಲಾ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಗಣಿಸಲಾಗಿದ್ದು, ತಾಂತ್ರಿಕ ಹಾಗೂ ಆರ್ಥಿಕ ಸಾಧ್ಯತೆಗಳನ್ನು ಪರಿಶೀಲಿಸಿ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.




By
ForthFocus™