Sunday, August 30, 2026
Sunday, August 30, 2026

ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

Date:

ಉಡುಪಿ, ಜು.6: ಗ್ರಾಮಾಂತರ ಕೈಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ವಿವಿಧ ಕಸುಬುಗಳಾದ ಗಾರೆ ಕೆಲಸ, ಮರಗೆಲಸ, ದೋಬಿ, ಕಮ್ಮಾರಿಕೆ, ಪ್ಲಂಬರ್, ಎಲೆಕ್ಟ್ರಿಷಿಯನ್, ಕ್ಷೌರಿಕ, ಬ್ಯೂಟಿ ಪಾರ್ಲರ್ ಹಾಗೂ ಟೈಲರಿಂಗ್ ವೃತ್ತಿಯ ಗರಿಷ್ಟ ರೂ.8,000/- ಮೊತ್ತದ ವಿದ್ಯುತ್‌ ಚಾಲಿತ ಉಪಕರಣಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಉಪಕರಣಗಳನ್ನು ಪಡೆಯಲಿಚ್ಛಿಸುವ ಗ್ರಾಮೀಣ ಪ್ರದೇಶದ ಅರ್ಜಿದಾರರು ಆನ್‌ಲೈನ್ ವೆಬ್‌ಸೈಟ್ udupi.nic.in

ನಲ್ಲಿ ನಮೂದಿಸಿದ ಲಿಂಕ್‌ನ ಮುಖಾಂತರ ಅರ್ಜಿಗಳನ್ನು ಭರ್ತಿ ಮಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ದೃಢೀಕರಣದೊಂದಿಗೆ ಜುಲೈ 10 ರಿಂದ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ ವ್ಯಾಪ್ತಿಯ ಕುಶಲಕರ್ಮಿಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ. ಅರ್ಜಿದಾರರು ಆನ್‌ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಯ ಮೂಲ ಪ್ರತಿಯನ್ನು ಉಪ ನಿರ್ದೇಶಕರು, ಗ್ರಾಮಾಂತರ ಕೈಗಾರಿಕೆ, “ಬಿ ಬ್ಲಾಕ್”, # ನಂ.207, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ಕಛೇರಿಗೆ ತಪ್ಪದೇ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂ.ಸಂಖ್ಯೆ: 0820-2574915 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಗ್ರಾಮಾಂತರ ಕೈಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!