Wednesday, August 12, 2026
Wednesday, August 12, 2026

ತ್ಯಾಜ್ಯ ನೀರು ವೈಜ್ಞಾನಿಕವಾಗಿ ಸಂಸ್ಕರಿಸಲು ನಗರಸಭೆ ಸೂಚನೆ

ತ್ಯಾಜ್ಯ ನೀರು ವೈಜ್ಞಾನಿಕವಾಗಿ ಸಂಸ್ಕರಿಸಲು ನಗರಸಭೆ ಸೂಚನೆ

Date:

ಉಡುಪಿ, ಜು.14: ಉಡುಪಿ ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ಗಳ ವಸತಿ ಸಮುಚ್ಚಯ, ವಾಣಿಜ್ಯ ಮಳಿಗೆಗಳಿಂದ ತ್ಯಾಜ್ಯ ನೀರನ್ನು ಮಳೆ ನೀರು ಹರಿಯುವ ಚರಂಡಿಗೆ ಹರಿಯಬಿಡುತ್ತಿರುವುದರಿಂದ, ಸಾರ್ವಜನಿಕರ ಆರೋಗ್ಯಕ್ಕೆ ಧಕ್ಕೆ ಹಾಗೂ ಪರಿಸರ ಮಾಲಿನ್ಯ ಉಂಟಾಗಿ ಡೆಂಗ್ಯೂ, ಮಲೇರಿಯಾ ಮುಂತಾದ ಸಾಂಕ್ರಾಮಿಕ ರೋಗಗಳು ಹರಡುತ್ತಿರುವ ಜೊತೆಗೆ ನಗರ ವ್ಯಾಪ್ತಿಯಲ್ಲಿ ಹರಿಯುವ ಇಂದ್ರಾಣಿ ನದಿಯ ನೀರು ಕಲುಷಿತಗೊಂಡಿರುತ್ತದೆ.

ಸಾರ್ವಜನಿಕರು ತಮ್ಮ ಮನೆ, ವಸತಿ ಸಮುಚ್ಚಯ ಹಾಗೂ ವಾಣಿಜ್ಯ ಮಳಿಗೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ವಿಲೇಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ತ್ಯಾಜ್ಯ ನೀರನ್ನು ಸಂಸ್ಕರಿಸದೇ ಮಳೆ ನೀರಿನ ಚರಂಡಿಗೆ ಮತ್ತು ಇಂದ್ರಾಣಿ ನದಿಗೆ ಪೈಪ್ ಮೂಲಕ ನೇರವಾಗಿ ಬಿಡುತ್ತಿರುವವರು ಪೈಪ್ ಅನ್ನು ತೆರವುಗೊಳಿಸುವಂತೆ ಸೂಚಿಸಲಾಗಿದ್ದು, ತಪ್ಪಿದಲ್ಲಿ ನಗರಸಭೆ ವತಿಯಿಂದ ಜುಲೈ 18 ರಂದು ತೆರವುಗೊಳಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಟಪಾಡಿ: ಆಟಿ ಕಷಾಯ ಮತ್ತು ಮೆಂತೆ ಗಂಜಿ ವಿತರಣೆ

ಕಟಪಾಡಿ, ಆ.12: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಆ.14: ಆಭರಣ ಮೋಟಾರ್ಸ್ ನಲ್ಲಿ ನೇರ ಸಂದರ್ಶನ

ಉಡುಪಿ, ಆ.11: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್...

ಜಂತುಹುಳು ನಿವಾರಣಾ ಮಾತ್ರೆ ಸೇವಿಸಿ ಆರೋಗ್ಯಯುತ ಜೀವನ ನಡೆಸಿ: ಶಾಸಕ ಯಶ್‌ಪಾಲ್ ಎ ಸುವರ್ಣ ಕರೆ

ಉಡುಪಿ, ಆ.11: ಮಕ್ಕಳಲ್ಲಿ ಜಂತುಹುಳುಗಳ ಭಾದೆಯಿಂದ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಉಂಟಾಗಿ...

ಜೈ ಕುಂದಾಪ್ರ ಸೇವಾ ಟ್ರಸ್ಟ್ ರಾಜ್ಯಕ್ಕೆ ಮಾದರಿ: ಭಾಸ್ಕರ್ ಸ್ವಾಮಿ

ಕೋಟ, ಆ.11: ಜೈ ಕುಂದಾಪ್ರ ಸೇವಾ ಟ್ರಸ್ಟ್ ಯುವ ಮನಸ್ಸುಗಳಿಗೆ ಸ್ಫೂರ್ತಿ,...
error: Content is protected !!