Wednesday, September 2, 2026
Wednesday, September 2, 2026

ತ್ಯಾಜ್ಯ ನೀರು ವೈಜ್ಞಾನಿಕವಾಗಿ ಸಂಸ್ಕರಿಸಲು ನಗರಸಭೆ ಸೂಚನೆ

ತ್ಯಾಜ್ಯ ನೀರು ವೈಜ್ಞಾನಿಕವಾಗಿ ಸಂಸ್ಕರಿಸಲು ನಗರಸಭೆ ಸೂಚನೆ

Date:

ಉಡುಪಿ, ಜು.14: ಉಡುಪಿ ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ಗಳ ವಸತಿ ಸಮುಚ್ಚಯ, ವಾಣಿಜ್ಯ ಮಳಿಗೆಗಳಿಂದ ತ್ಯಾಜ್ಯ ನೀರನ್ನು ಮಳೆ ನೀರು ಹರಿಯುವ ಚರಂಡಿಗೆ ಹರಿಯಬಿಡುತ್ತಿರುವುದರಿಂದ, ಸಾರ್ವಜನಿಕರ ಆರೋಗ್ಯಕ್ಕೆ ಧಕ್ಕೆ ಹಾಗೂ ಪರಿಸರ ಮಾಲಿನ್ಯ ಉಂಟಾಗಿ ಡೆಂಗ್ಯೂ, ಮಲೇರಿಯಾ ಮುಂತಾದ ಸಾಂಕ್ರಾಮಿಕ ರೋಗಗಳು ಹರಡುತ್ತಿರುವ ಜೊತೆಗೆ ನಗರ ವ್ಯಾಪ್ತಿಯಲ್ಲಿ ಹರಿಯುವ ಇಂದ್ರಾಣಿ ನದಿಯ ನೀರು ಕಲುಷಿತಗೊಂಡಿರುತ್ತದೆ.

ಸಾರ್ವಜನಿಕರು ತಮ್ಮ ಮನೆ, ವಸತಿ ಸಮುಚ್ಚಯ ಹಾಗೂ ವಾಣಿಜ್ಯ ಮಳಿಗೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ವಿಲೇಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ತ್ಯಾಜ್ಯ ನೀರನ್ನು ಸಂಸ್ಕರಿಸದೇ ಮಳೆ ನೀರಿನ ಚರಂಡಿಗೆ ಮತ್ತು ಇಂದ್ರಾಣಿ ನದಿಗೆ ಪೈಪ್ ಮೂಲಕ ನೇರವಾಗಿ ಬಿಡುತ್ತಿರುವವರು ಪೈಪ್ ಅನ್ನು ತೆರವುಗೊಳಿಸುವಂತೆ ಸೂಚಿಸಲಾಗಿದ್ದು, ತಪ್ಪಿದಲ್ಲಿ ನಗರಸಭೆ ವತಿಯಿಂದ ಜುಲೈ 18 ರಂದು ತೆರವುಗೊಳಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...

ಪ್ರೇರಣಾ ಶಿಬಿರ ಮೌಲ್ಯಯುತ ಬದುಕಿಗೆ ರಹದಾರಿ-ಪಿ.ಜಿ.ಆರ್. ಸಿಂಧ್ಯಾ

ಬಾರಕೂರು, ಸೆ.1: ರೇಂಜರ್ ರೋವರ್ಸ್ ಪ್ರೇರಣಾ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು...

ಭಯೋತ್ಪಾದನೆ ಕುರಿತು ದ್ವಿಮುಖ ನೀತಿಗಳಿಗೆ ಅವಕಾಶವಿಲ್ಲ: ಬಿಷ್ಕೆಕ್‌ನಲ್ಲಿ ನಡೆದ ಎಸ್‌ಸಿಒ ಸಭೆಯಲ್ಲಿ ಪ್ರಧಾನಿ ಮೋದಿ

ಯು.ಬಿ.ಎನ್.ಡಿ., ಸೆ.1: ಪ್ರಧಾನಿ ನರೇಂದ್ರ ಮೋದಿ ಅವರು ಕಿರ್ಗಿಜ್ ಗಣರಾಜ್ಯದ ರಾಜಧಾನಿ...

ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಮನೋಜ್ಞ ದೇವಾಡಿಗಳಿಗೆ ದ್ವಿತೀಯ ಸ್ಥಾನ

ಉಡುಪಿ, ಸೆ.1: ಬೈಂದೂರಿನಲ್ಲಿ ನಡೆದ, "ಗಮ್ಮತ್ " ನಮ್ ಮಣ್ಣೂ ಭಾಷಿ...
error: Content is protected !!