ಕಾಪು, ಜು.20: ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ. ವಿದ್ಯಾಕುಮಾರಿ ಐ.ಎ.ಎಸ್ ಅವರು ಪ್ರಸ್ತುತ ಕರ್ನಾಟಕ ರಾಜ್ಯದ ಸಮಗ್ರ ಶಿಕ್ಷಣ ಇಲಾಖೆಯ ಯೋಜನಾ ನಿರ್ದೇಶಕರಾಗಿ ಬಡ್ತಿಯಾಗಿದ್ದು ಜುಲೈ 19ರಂದು ದಂಪತಿ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ವತಿಯಿಂದ ಗೌರವಿಸಲಾಯಿತು.
ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ.ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿ, ಸದಸ್ಯ ಮಾಧವ ಪಾಲನ್, ನವದುರ್ಗಾ ಲೇಖನ ಯಜ್ಞ ಸಮಿತಿ ಕೋಶಾಧಿಕಾರಿ ಸುನಿಲ್ ಎಸ್. ಪೂಜಾರಿ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.




By
ForthFocus™