ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ ಕಾರ್ಯಕ್ರಮ ಸೋಮವಾರ ಹಿರಿಯಡಕ ದೇವಾಡಿಗ ಸಭಾಭವನದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಉಡುಪಿ ತಹಶೀಲ್ದಾರರಾದ ಗುರುರಾಜ್, ಉಡುಪಿ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಾದ ಮಮತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸಂತೋಷ್ ಜೋಗಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.




By
ForthFocus™