ಕಟಪಾಡಿ, ಜು.23: ತ್ರಿಶಾ ಕ್ಲಾಸಸ್ ವತಿಯಿಂದ ಸಿಎ ಫೈನಲ್(19) , ಸಿಎ ಇಂಟರ್ ಮೀಡಿಯೆಟ್(21) , ಸಿಎ ಫೌಂಡೇಷನ್(80) ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಇತ್ತೀಚೆಗೆ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಸಭಾಂಗಣದಲ್ಲಿ ನಡೆಯಿತು. ಅಧ್ಯಕ಼ತೆ ವಹಿಸಿದ್ದ ತ್ರಿಶಾ ಸಂಸ್ಥೆ ಸಂಸ್ಥಾಪಕರು ಸಿಎ ಗೋಪಾಲಕೃಷ್ಣ ಭಟ್ ಅವರು, ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ನಿಮ್ಮ ಪ್ರೋತ್ಸಾಹಕ್ಕೆ ತ್ರಿಶಾ ಎಂದಿಗೂ ನಿಮ್ಮ ಜೊತೆ ಇದೆ ಎಂದು ಹೇಳಿದರು. ತ್ರಿಶಾ ಸಂಸ್ಥೆಯ ಟ್ರಸ್ಟಿಗಳಾದ ನಮಿತಾ ಜಿ ಭಟ್ ಹಾಗೂ ರಾಮ್ ಪ್ರಭು, ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ನ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರೊ. ಕುಲದೀಪ್ ವೈ.ಯು, ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರಿಪ್ರಸಾದ್, ತ್ರಿಶಾ ಕ್ಲಾಸಸ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸನ್ಮಾನಿಸಲ್ಪಡುವ ವಿದ್ಯಾರ್ಥಿಗಳ ಹೆಸರನ್ನು ಗೌರಿ ಕಾಮತ್ ವಾಚಿಸಿದರು. ಕಾರ್ಯಕ್ರಮವನ್ನು ಪ್ರಜ್ಞಾ ರಾವ್ ನಿರೂಪಿಸಿ, ವಂದಿಸಿದರು.
ತ್ರಿಶಾ ಕ್ಲಾಸಸ್: ಸಿಎ ಫೈನಲ್, ಸಿಎ ಇಂಟರ್ ಮೀಡಿಯೆಟ್, ಸಿಎ ಫೌಂಡೇಷನ್ ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ತ್ರಿಶಾ ಕ್ಲಾಸಸ್: ಸಿಎ ಫೈನಲ್, ಸಿಎ ಇಂಟರ್ ಮೀಡಿಯೆಟ್, ಸಿಎ ಫೌಂಡೇಷನ್ ಸಾಧಕರಿಗೆ ಸನ್ಮಾನ ಕಾರ್ಯಕ್ರಮ
Date:




By
ForthFocus™