Monday, July 27, 2026
Monday, July 27, 2026

ಗೋಮಾತೆಯ ಗೌರವ ಅಭಿಯಾನ- ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ

ಗೋಮಾತೆಯ ಗೌರವ ಅಭಿಯಾನ- ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ

Date:

ಮಣಿಪಾಲ, ಜು.27: ಉಡುಪಿ ಗೋಮಾತೆಯ ಗೌರವದ ಅಭಿಯಾನ ಅಂಗವಾಗಿ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ರಾಜ್ಯದ ಮುಖ್ಯಮಂತ್ರಿಗಳಿಗೆ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಸೋಮವಾರ ಮನವಿ ಸಲ್ಲಿಸಲಾಯಿತು. ಉಡುಪಿ ಜಿಲ್ಲಾಧಿಕಾರಿಗಳ ಪರವಾಗಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮನವಿ ಸ್ವೀಕರಿಸಿದರು.

ಭಾರತದಲ್ಲಿ ಗೋ ಹತ್ಯೆ ನಿಷೇಧ ಸಂಪೂರ್ಣವಾಗಿ ಜಾರಿಯಾಗಬೇಕು, ಹಸುವಿಗೆ ರಾಷ್ಟ್ರ ಮಾತೆ ಅಥವಾ ರಾಷ್ಟ್ರೀಯ ಪ್ರತಿಷ್ಠಾನದ ಗೌರವಾನ್ವಿತ ಸ್ಥಾನಮಾನ ನೀಡಬೇಕು, ಗೋ ಸೇವೆಗಾಗಿ ಕೇಂದ್ರೀಯ ಕಾನೂನನ್ನು ಜಾರಿಗೆ ತರಬೇಕು ಮತ್ತು ಕೇಂದ್ರೀಯ ಸಚಿವಾಲಯವನ್ನು ಸ್ಥಾಪನೆ ಮಾಡಬೇಕು, ಮೇವು ಭದ್ರತಾ ನೀತಿಯನ್ನು ಅಂತಿಮಗೊಳಿಸಬೇಕು, ಅದೇ ರೀತಿ ವೇದ ಲಕ್ಷಣ ಗೋ ವಂಶದ ಜಾನುವಾರುಗಳಿಂದ ಪಡೆದ ಪಂಚಗವ್ಯ ಉತ್ಪನ್ನಗಳ ಉತ್ಪಾದನೆ ಮತ್ತು ಮಾರುಕಟ್ಟೆಯನ್ನು ಹೆಚ್ಚಿಸಬೇಕು ಎಂಬ ಬೇಡಿಕೆಗಳನ್ನು ಮನವಿ ಪತ್ರದಲ್ಲಿ ಸಲ್ಲಿಸಲಾಗಿದೆ. ಮನವಿಯನ್ನು ರಾಜ್ಯಪಾಲರಿಗೆ ಕೂಡ ಸಲ್ಲಿಸಲಾಗಿದೆ.

ಗೋಮಾತೆಯ ಗೌರವ ಅಭಿಯಾನದ ತಾಲೂಕು ಸಂಚಾಲಕರುಗಳಾದ ಮಾಜಿ ನಗರಸಭಾ ಸದಸ್ಯ ವಿಜಯ್ ಕೊಡವೂರು, ಮಾಜಿ ಜಿ.ಪಂ ಸದಸ್ಯೆ ಗೀತಾಂಜಲಿ ಸುವರ್ಣ, ಬ್ರಹ್ಮಾವರ ತಾಲೂಕು ಪ್ರಮುಖರಾದ ರಾಘವೇಂದ್ರ ಪ್ರಭು ಕರ್ವಾಲು, ವೀಣಾ ಶೆಟ್ಟಿ, ರಮಿತಾ ಸೂರ್ಯವಂಶಿ, ಸಂತೋಷ್, ಎಬಿವಿಪಿ ಪ್ರಮುಖರಾದ ರಂಜಿತ್, ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆತ್ರಾಡಿ ಗ್ರಾಮಸ್ಥರ ಅಹವಾಲು ಸ್ವೀಕಾರ; ವಿವಿಧ ಸವಲತ್ತು ವಿತರಣೆ

ಹಿರಿಯಡಕ, ಜು.27: ಆತ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಪೊಲೀಸ್ ಬ್ಯಾರಿಕೇಡ್‌ಗಳ ಮರುನವೀಕರಣ ಹಾಗೂ ಮೇಲ್ದರ್ಜೆಗೇರಿಸುವ ಕಾರ್ಯಕ್ಕೆ ಚಾಲನೆ

ಉಡುಪಿ, ಜು.27: ಉಡುಪಿ ಜಿಲ್ಲೆಯ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿರುವ ಪೊಲೀಸ್ ಬ್ಯಾರಿಕೇಡ್‌ಗಳ...

ನಟ ಶರಣ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು, ಜು.27: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಶರಣ್ ಅವರು...

ಪಲಿಮಾರು: ಗ್ರಾಮಸ್ಥರ ಅಹವಾಲು ಸ್ವೀಕಾರ; ವಿವಿಧ ಸವಲತ್ತು ವಿತರಣೆ

ಶಿರ್ವ, ಜು.27: ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...
error: Content is protected !!