ಶಿರ್ವ, ಜು.27: ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಸೋಮವಾರ ಪಲಿಮಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪಂಚಾಯತ್ ಶೇಖಡಾ 25 ನಿಧಿಯಿಂದ 2 ಫಲಾನುಭವಿಗಳಿಗೆ ಮನೆ ರಿಪೇರಿ ಸಹಾಯಧನ, 2 ಫಲಾನುಭವಿಗಳಿಗೆ ವೈದ್ಯಕೀಯ ಸಹಾಯಧನ ಹಾಗೂ 5 ಶೇಖಡ ನಿಧಿಯಿಂದ 2 ಫಲಾನುಭವಿಗಳಿಗೆ ವೈದ್ಯಕೀಯ ಸಹಾಯಧನ ಚಕ್ ವಿತರಣೆ ಮಾಡಲಾಯಿತು. ಪಲಿಮಾರು ದೇವಸ್ಥಾನ ರಥಬೀದಿ ರಸ್ತೆಗೆ ಶಾಸಕರಾದ ಶಿಫಾರಸ್ಸಿನ ಮೇರೆಗೆ 21 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ನೆರವೇರಿಸಿದರು.
ಕಾಪು ತಹಶೀಲ್ದಾರರಾದ ಅಂನತ ಶಂಕರ್, ಪ್ರಭಾರ ಸಹಾಯಕ ನಿರ್ದೇಶಕರಾದ ಶಶಿಧರ್, ಪಲಿಮಾರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಾದ ಸುನಿಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಚಂದ್ರಕಲಾ, ಪಲಿಮಾರು ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.




By
ForthFocus™