Monday, July 27, 2026
Monday, July 27, 2026

ಆತ್ರಾಡಿ ಗ್ರಾಮಸ್ಥರ ಅಹವಾಲು ಸ್ವೀಕಾರ; ವಿವಿಧ ಸವಲತ್ತು ವಿತರಣೆ

ಆತ್ರಾಡಿ ಗ್ರಾಮಸ್ಥರ ಅಹವಾಲು ಸ್ವೀಕಾರ; ವಿವಿಧ ಸವಲತ್ತು ವಿತರಣೆ

Date:

ಹಿರಿಯಡಕ, ಜು.27: ಆತ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ ವಿವಿಧ ಸವಲತ್ತು ವಿತರಣೆ ವಿತರಣೆ ಕಾರ್ಯಕ್ರಮ ಸೋಮವಾರ ಆತ್ರಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪಂಚಾಯತ್ ನ 25 ಶೇಖಡಾ ಅನುದಾನದಲ್ಲಿ 14 ಫಲಾನುಭವಿಗಳಿಗೆ ವೈದ್ಯಕೀಯ ಸಹಾಯಧನ ಹಾಗೂ 4 ಫಲಾನುಭವಿಗಳಿಗೆ ಕೌಶಲ್ಯಾಭಿವೃದ್ಧಿ ಸಾಹಯಧನ 2 ಫಲಾನುಭವಿಗಳಿಗೆ ಶವಸಂಸ್ಕಾರ ಸಹಾಧನ 5 ಶೇಖಡಾ ಅನುದಾನದಲ್ಲಿ 20 ಜನ ಫಲಾನುಭವಿಗಳಿಗೆ ವಿಕಲಚೇತನರಿಗೆ ಸಹಾಧನ ವಿತರಣೆ ಮಾಡಲಾಯಿತು.

ಶಾಸಕರ ಶಿಫಾರಸ್ಸಿನ ಮೇರೆಗೆ ವಿವಿಧ ರಸ್ತೆಗಳ ಅಭಿವೃದ್ಧಿಗೆ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಉಡುಪಿ ತಹಶೀಲ್ದಾರರಾದ ಗುರುರಾಜ್, ಉಡುಪಿ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ, ಆತ್ರಾಡಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಾದ ಸಂದೀಪ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸಿದ್ದೇಶ್, ಗ್ರಾಮ ಆಡಳಿತಾಧಿಕಾರಿಗಳಾದ ಸುಮಿತ್ರಾ, ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!