ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು ಮಠ ಶ್ರೀಕೃಷ್ಣಮಠ ಉಡುಪಿ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಂಸ್ಕೃತ ಅಧ್ಯಾಪಕ ಸಂಘ(ರಿ) ಮತ್ತು ಪ್ರೌಢಶಾಲಾ ಸಂಸ್ಕೃತ ಅಧ್ಯಾಪಕರ ಸಂಘ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ‘ಸಂಸ್ಕೃತ ಪ್ರತಿಭಾ ಪುರಸ್ಕಾರ’ವನ್ನು ಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ನಡೆಸಿ, ಅನುಗ್ರಹ ಸಂದೇಶವನ್ನು ನೀಡಿದರು.
ಮುಖ್ಯ ಅತಿಥಿಗಳಾಗಿ ಶೀರೂರು ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ,ಉಡುಪಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಲೋಕೇಶ್ ಸಿ., ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಲ್ಲಮ್ಮ, ಕಾರ್ಕಳದ ಲೆಕ್ಕಪರಿಶೋಧಕರಾದ ಕೆ ಕಮಲಾಕ್ಷ ಕಾಮತ್, ಗುರುವಾಯೂರು ಸಂಸ್ಕೃತ ವಿಶ್ವವಿದ್ಯಾಲಯದ ಉಪನ್ಯಾಸಕರಾದ ಪ್ರೊ. ಹರಿಪ್ರಸಾದ್ ಕೆ ಉಪಸ್ಥಿತರಿದ್ದರು. ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಡಾ. ರಮೇಶ ಟಿ ಎಸ್ ಇವರು ವಿಶೇಷ ಉಪನ್ಯಾಸವನ್ನು ನೀಡಿದರು. ವಿದ್ವಾನ್ ಪ್ರಭಾಕರ ಭಟ್ ಸ್ವಾಗತಿಸಿ, ವಿದ್ವಾನ್ ಅಶೋಕ ಹೆಗಡೆ ವಂದಿಸಿದರು. ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಕಾರ್ಯಕ್ರಮ ನಿರೂಪಿಸಿದರು.




By
ForthFocus™