ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ ಕಾವ್ಯಶ್ರೀ ಪ್ರಶಸ್ತಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಹಾಗೂ ಲೇಖಕರಾದ ನರೇಂದ್ರ ಎಸ್ ಗಂಗೊಳ್ಳಿ ಆಯ್ಕೆಯಾಗಿರುತ್ತಾರೆ. ವೈವಿಧ್ಯಮಯ ವಿಚಾರಗಳ ಲೇಖಕರಾಗಿ ಗುರುತಿಸಿಕೊಂಡಿರುವ ಹಾಗು ಹೇಳದೆ ಹೋದ ಮಗಳಿಗೆ, ನಾಯಿ ನಾನು, ನಿಭ್ರತ, ರೂಮಿನೊಳಗಿಂದ ಸೇರಿದಂತೆ ಒಟ್ಟು ಏಳು ಕೃತಿಗಳನ್ನು ಹೊರತಂದಿರುವ ನರೇಂದ್ರ ಎಸ್ ಗಂಗೊಳ್ಳಿ ಅವರ ಮುಂದಿನ ಕೃತಿ ಅವಳ ಕೂಗು ಬಿಡುಗಡೆಯ ತಯಾರಿಯಲ್ಲಿದೆ.
ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ
ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ
Date:




By
ForthFocus™