Wednesday, July 29, 2026
Wednesday, July 29, 2026

ಮಾದಕ ವ್ಯಸನಗಳಿಂದ ಜಾಗೃತರಾಗಿರಿ

ಮಾದಕ ವ್ಯಸನಗಳಿಂದ ಜಾಗೃತರಾಗಿರಿ

Date:

ಹಿರಿಯಡಕ, ಜು.28: ತಮ್ಮ ಸುತ್ತ-ಮುತ್ತಲಿನ ಪರಿಸರದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ದುರುಪಯೋಗದ ಕುರಿತು ಎಚ್ಚರವಹಿಸುವಂತೆ ಕೆ.ಜಿ.ಟಿ.ಟಿ.ಐ, ಕಾರ್ಕಳದ ತರಬೇತುದಾರರಾದ ವಿಂದ್ಯಾ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಮಾದಕ ವ್ಯಸನ ತಡೆ ಸಮಿತಿ ಸೋಮವಾರ ಆಯೋಜಿಸಿದ ಮಾದಕ ವ್ಯಸನ ಜಾಗೃತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಪ್ರಾಂಶುಪಾಲ ಡಾ. ಜಯಪ್ರಕಾಶ್‌ ಶೆಟ್ಟಿ ಹೆಚ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಐಕ್ಯುಎಸಿ ಸಂಚಾಲಕ ಡಾ. ಲಿತಿನ್‌ ಬಿ.ಎಂ., ರಾ.ಸೇ.ಯೋ. ಕಾರ್ಯಕ್ರಮಾಧಿಕಾರಿ ನಂದೀಶ್‌ ಕುಮಾರ್‌ ಕೆ.ಸಿ. ಉಪಸ್ಥಿತರಿದ್ದರು. ಮಾದಕ ವ್ಯಸನ ತಡೆ ಸಮಿತಿ ಸಂಚಾಲಕಿ ಅಪರ್ಣ ಕೆ ಯು ಕಾರ್ಯಕ್ರಮ ಆಯೋಜಿಸಿ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!