ಹಿರಿಯಡಕ, ಜು.28: ತಮ್ಮ ಸುತ್ತ-ಮುತ್ತಲಿನ ಪರಿಸರದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ದುರುಪಯೋಗದ ಕುರಿತು ಎಚ್ಚರವಹಿಸುವಂತೆ ಕೆ.ಜಿ.ಟಿ.ಟಿ.ಐ, ಕಾರ್ಕಳದ ತರಬೇತುದಾರರಾದ ವಿಂದ್ಯಾ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಮಾದಕ ವ್ಯಸನ ತಡೆ ಸಮಿತಿ ಸೋಮವಾರ ಆಯೋಜಿಸಿದ ಮಾದಕ ವ್ಯಸನ ಜಾಗೃತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಪ್ರಾಂಶುಪಾಲ ಡಾ. ಜಯಪ್ರಕಾಶ್ ಶೆಟ್ಟಿ ಹೆಚ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಐಕ್ಯುಎಸಿ ಸಂಚಾಲಕ ಡಾ. ಲಿತಿನ್ ಬಿ.ಎಂ., ರಾ.ಸೇ.ಯೋ. ಕಾರ್ಯಕ್ರಮಾಧಿಕಾರಿ ನಂದೀಶ್ ಕುಮಾರ್ ಕೆ.ಸಿ. ಉಪಸ್ಥಿತರಿದ್ದರು. ಮಾದಕ ವ್ಯಸನ ತಡೆ ಸಮಿತಿ ಸಂಚಾಲಕಿ ಅಪರ್ಣ ಕೆ ಯು ಕಾರ್ಯಕ್ರಮ ಆಯೋಜಿಸಿ ನಿರೂಪಿಸಿದರು.




By
ForthFocus™