ಕಟಪಾಡಿ, ಆ.2: ತ್ರಿಶಾ ವಿದ್ಯಾ ಪಿ. ಯು ಕಾಲೇಜಿನಲ್ಲಿ ಕೆ.ಸಿ.ಇ.ಟಿ, ನೀಟ್ ಮತ್ತು ಜೆಇಇ ಪ್ರವೇಶ ಪರೀಕ್ಷೆಗಳ ಕುರಿತು ಪ್ರಥಮ ಮತ್ತು ದ್ದಿತೀಯ ಪಿ. ಯು ವಿದ್ಯಾರ್ಥಿಗಳಿಗೆ ಒರಿಯಂಟೇಶನ್ ಕಾರ್ಯಕ್ರಮ ನಡೆಯಿತು. ಅಧ್ಯಕ್ಷೆತೆಯನ್ನು ವಹಿಸಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿ. ಎ. ಗೋಪಾಲಕೃಷ್ಣ ಭಟ್ ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ಬಗ್ಗೆ ವಿಚಾರಗಳನ್ನು ಹಂಚಿಕೊಂಡರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿರುವ ರಾಷ್ಟ್ರೋತ್ಥಾನ ಪಿ. ಯು. ಕಾಲೇಜಿನ ಪ್ರಾಂಶುಪಾಲರಾದ ಭ್ಯಾಗ್ಯಶ್ರಿ ಐತಾಳ್ ವಿದ್ಯಾರ್ಥಿಗಳ ಭವಿಷ್ಯದ ಕುರಿತು ಮಾರ್ಗದರ್ಶನ ನೀಡಿ, ಪರೀಕ್ಷಾ ಸಿದ್ದತೆಯ ಕುರಿತು ಮಾಹಿತಿಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರಿಪ್ರಸಾದ್ ಇವರು ವಿದ್ಯಾರ್ಥಿಗಳಿಗೆ ಅಗತ್ಯವಾದ ಮಾಹಿತಿಗಳನ್ನು ನೀಡಿದರು. ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು. ಭೌತಶಾಸ್ತ್ರ ವಿಭಾಗದ ಉಪನ್ಯಾಸಕರಾದ ನವೀನ್ ಸ್ವಾಗತಿಸಿ, ಕನ್ನಡ ವಿಭಾಗದ ಉಪನ್ಯಾಸಕಿ ಸರಿತ ವಂದಿಸಿದರು.
ತ್ರಿಶಾ ವಿದ್ಯಾ ಪಿಯು ಕಾಲೇಜು: ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ
ತ್ರಿಶಾ ವಿದ್ಯಾ ಪಿಯು ಕಾಲೇಜು: ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ
Date:




By
ForthFocus™