Tuesday, August 4, 2026
Tuesday, August 4, 2026

ಆರೂರು: ಸಿಸಿ ಕ್ಯಾಮೆರಾ ಮತ್ತು ನಿಯಂತ್ರಣ ಕೊಠಡಿ ಉದ್ಘಾಟನೆ

ಆರೂರು: ಸಿಸಿ ಕ್ಯಾಮೆರಾ ಮತ್ತು ನಿಯಂತ್ರಣ ಕೊಠಡಿ ಉದ್ಘಾಟನೆ

Date:

ಆರೂರು, ಆ.2: ಶ್ರೀ ವಿಷ್ಣುಮೂರ್ತಿ ಯುವಕ ಮಂಡಲ ಆರೂರು ನೇತೃತ್ವದಲ್ಲಿ, ಬ್ರಹ್ಮಾವರ ವ್ಯವಸಾಯ ಸೇವ ಸಹಕಾರಿ ಸಂಘ ಹಾಗೂ ದಾನಿಗಳ ಸಹಕಾರದಿಂದ ಆರೂರು ಹಾಲೆಕಟ್ಟೆ ವೃತ್ತದಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುವ್ಯವಸ್ಥೆಯ ಹಿತ ದೃಷ್ಟಿಯಿಂದ ಅಳವಡಿಸಿದ ಸಿಸಿ ಕ್ಯಾಮೆರಾ ಮತ್ತು ಅದರ ನಿಯಂತ್ರಣ ಕೊಠಡಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಸಕ ಯಶ್ಪಾಲ್ ಸುವರ್ಣ ಸಿಸಿ ಕ್ಯಾಮೆರಾ ಉದ್ಘಾಟನೆ ನಡೆಸಿದ್ದು ಉಡುಪಿಯ ವಕೀಲರಾದ ಆರೂರು ಸುಕೇಶ್ ಶೆಟ್ಟಿ ಅದರ ನಿಯಂತ್ರಣ ಕೊಠಡಿಯ ಉದ್ಘಾಟನೆಯನ್ನು ನಡೆಸಿದರು.

ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಬಿರ್ತಿ, ಆರೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಕುಲಾಲ್, ನೀಲಮ್ಮ ಚಾರಿಟೇಬಲ್ ಟ್ರಸ್ಟಿನ ಆರೂರು ತಿಮ್ಮಪ್ಪ ಶೆಟ್ಟಿ, ಆರೂರು ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಮಾಜಿ ಅಧ್ಯಕ್ಷರಾದ ರತ್ನಾಕರ ಭಟ್ ಆರೂರು, ಉದ್ಯಮಿ ಶ್ರೀಧರ್ ಶೆಟ್ಟಿ ಆರೂರು, ಕಮಲಾಕ್ಷ್ ಹೆಬ್ಬಾರ್, ಹರೀಶ್ ಶೆಟ್ಟಿ ಚೇರ್ಕಾಡಿ, ಚಂದ್ರಶೇಖರ್ ಕಲ್ಕೂರ, ಶ್ರೀ ವಿಷ್ಣುಮೂರ್ತಿ ಯುವಕ ಮಂಡಲದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಆರೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗುರುರಾಜ್ ರಾವ್ ಆರೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಷ್ಣುಮೂರ್ತಿ ಯುವಕ ಮಂಡಲದ ಅಧ್ಯಕ್ಷ ಸಿಎ ಅಶ್ವತ್ ಶೆಟ್ಟಿ ಸ್ವಾಗತಿಸಿ, ವಿಷ್ಣು ಪ್ರಸಾದ್ ವಂದಿಸಿದರು. ಯಾದವ್ ಸೇರಿಗಾರ್ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯಕ್ಷಗಾನ ಕಲಾರಂಗ: ಕಾರ್ಯಕರ್ತರ ಶ್ರೇಯೋಭಿವೃದ್ಧಿಗೆ ಪ್ರಾರ್ಥನೆ

ಉಡುಪಿ, ಆ.೩: ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ ಧಾರ್ಮಿಕ ಕಾರ್ಯಕ್ರಮ...

ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್ಪಾಲ್ ಸುವರ್ಣ

ಉಡುಪಿ, ಆ.3: ಪುಷ್ಪಾನಂದ ಫೌಂಡೇಶನ್ ವತಿಯಿಂದ 2025-2026ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ...

ಆ.6: ಮಣಿಪಾಲದ ಕಂಟ್ರಿ ಇನ್ ಹೊಟೇಲ್ ನಲ್ಲಿ ನೇರ ಸಂದರ್ಶನ

ಉಡುಪಿ, ಆ.3: ನಗರದ ಮಣಿಪಾಲ ರಜತಾದ್ರಿ ರಸ್ತೆಯ ವಿದ್ಯಾರತ್ನ ನಗರದ ಡಿ.ಸಿ...
error: Content is protected !!