ಕುರ್ಕಾಲು, ಆ.3: ಕುರ್ಕಾಲು ಕೊರಗರ ಕಾಲೋನಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಕೊರಗ ಸಮುದಾಯದವರೊಂದಿಗೆ ಸಂವಾದ ನಡೆಸಿದರು. 30 ವರ್ಷಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಕೊರಗ ಮುಖಂಡರಾದ ಸುಂದರ ಇವರನ್ನು ಅಭಿನಂದಿಸಲಾಯಿತು.
ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಸುಮಾ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶರಣ್ ಕುಮಾರ್ ಮಟ್ಟು, ಉಪಾಧ್ಯಕ್ಷರಾದ ಎಂ.ಜಿ ನಾಗೇಂದ್ರ, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ಕಾಪು ಮಂಡಲ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷರಾದ ಪಾರ್ಥಸಾರಥಿ, ಕುರ್ಕಾಲು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಪ್ರವೀಣ್ ಪೂಜಾರಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.




By
ForthFocus™