Friday, August 7, 2026
Friday, August 7, 2026

ಯುವ ವಿಚಾರ ವೇದಿಕೆ (ರಿ) ಕೊಳಲಗಿರಿ: ಆಟಿಡೊಂಜಿ ದಿನ

ಯುವ ವಿಚಾರ ವೇದಿಕೆ (ರಿ) ಕೊಳಲಗಿರಿ: ಆಟಿಡೊಂಜಿ ದಿನ

Date:

ಉಡುಪಿ, ಆ.5: ಕನ್ನಡ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಯುವವಿಚಾರ ವೇದಿಕೆ (ರಿ) ಕೊಳಲಗಿರಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಹಿರಿಯರಾದ ಗಿರಿಜಾ ಆಚಾರ್ಯ ನರ್ನಾಡು, ಚಿನ್ನು ಕೊಳಲಗಿರಿ ಇವರು ಸಿದ್ದೆಯಿಂದ ಸೇರಿಗೆ, ಸೇರಿನಿಂದ ಕಳೆಸೆಗೆ ಅಕ್ಕಿ ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯ ಅಧ್ಯಕ್ಷರಾದ ಸಂದೀಪ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಉಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾದ ರಮೇಶ ಕರ್ಕೇರ, ಉಪ್ಪೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುನಿಲ್ ಶೆಟ್ಟಿ, ಹಿರಿಯರಾದ ಮಾಧವ ಪಾಣ, ಶಕುಂತಲಾ ಸುಕೇಶ್ ಉಪಸ್ಥಿತರಿದ್ದರು.

ವೇದಿಕೆಯ ಪ್ರಧಾನ ಕಾರ್ಯದರ್ಶಿ ಸದಾಶಿವ ಕುಮಾರ್ ಸ್ವಾಗತಿಸಿದರು. ಪದಾಧಿಕಾರಿಗಳಾದ ದಿನೇಶ್ ಶೆಟ್ಟಿ, ರವೀಂದ್ರ ಕುಮಾರ್, ಸುಕೇಶ್ ಪಾಣ, ಕೇಶವ್ ಪುಷ್ಪಲತಾ ನರ್ಸರಿ, ಶಿವಾನಂದ , ಶಶಿಕುಮಾರ್, ಹೇಮಂತ್, ವೈಭವ್, ಅವಿನಾಶ್, ಶಾಂತ ಸೆಲ್ವರಾಜ್, ಶೋಭಾ ಯೋಗೀಶ್, ಜಯಲಕ್ಷ್ಮೀ, ಸುಜಾತ ಟೀಚರ್, ಲಕ್ಷ್ಮೀ ಟೀಚರ್ , ಸೌಮ್ಯ ಶೆಟ್ಟಿ, ಪ್ರಿಯಾಂಕಾ ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಅಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಹಿಂದಿನ ಕಾಲದಲ್ಲಿ ಆಟಿ ತಿಂಗಳಿನಲ್ಲಿ ತಯಾರಿಸುತ್ತಿದ್ದ 28 ರಷ್ಷು ವಿವಿಧ ಬಗೆಯ ಖಾದ್ಯಗಳನ್ನು ವೇದಿಕೆಯ ಸದಸ್ಯರು ತಯಾರಿಸಿ ತಂದಿದ್ದರು. ಕೃಷಿ ಪರಿಕರಗಳ ಜೊತೆಗೆ ಹಿಂದಿನ ಕಾಲದಲ್ಲಿ ಬಳಸುತ್ತಿದ್ದ ಕೆಲವು ವಸ್ತುಗಳನ್ನು ಪ್ರದರ್ಶಿಸಿ ಮಾಹಿತಿ ನೀಡಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಧುಸೂದನ್ ಹೇರೂರು ದಂಪತಿಗಳಿಗೆ ಸನ್ಮಾನ

ಕಟಪಾಡಿ, ಆ.6: ಉಡುಪಿ ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ...

ತೋನ್ಸೆ (ಕೆಮ್ಮಣ್ಣು) ಗ್ರಾಮ ಪಂಚಾಯತ್: ಸಾರ್ವಜನಿಕರ ಅಹವಾಲು ಸ್ವೀಕಾರ

ಉಡುಪಿ, ಆ.6: ತೋನ್ಸೆ ಗ್ರಾಮ ಪಂಚಾಯತ್ ಕಚೇರಿಗೆ ಶಾಸಕ ಯಶ್ಪಾಲ್ ಸುವರ್ಣ...

ಆಗಸ್ಟ್ -ಸೆಪ್ಟಂಬರ್ ಮಾಹೆಯ ಪಡಿತರ ಒಂದೇ ಬಾರಿಗೆ ವಿತರಣೆ : ಪ್ರತ್ಯೇಕ ಬಯೋಮೆಟ್ರಿಕ್ ಕಡ್ಡಾಯ

ಉಡುಪಿ, ಆ.6: ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂತ್ಯೋದಯ ಮತ್ತು...

ತೆಂಕನಿಡಿಯೂರು ಕಾಲೇಜು: ಹೆಚ್ಐವಿ/ ಏಡ್ಸ್ ಜಾಗೃತಿ ಕಾರ್ಯಕ್ರಮ

ಮಲ್ಪೆ, ಆ.6: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...
error: Content is protected !!