


ಗಂಗೊಳ್ಳಿ, ಆ.5: ತಂಡದ ಏಕತೆಯಲ್ಲಿ ಯಶಸ್ಸು ಅಡಗಿದೆ. ಸ್ವಾರ್ಥಪರನಾಗದೆ ಎಲ್ಲರ ಅಭಿಪ್ರಾಯಗಳನ್ನು ಗೌರವಿಸುವ ಮತ್ತು ಗುರಿಯೆಡೆಗೆ ಬದ್ಧನಾಗಿ ಕೆಲಸ ಮಾಡುವ ವ್ಯಕ್ತಿ ಯಶಸ್ವಿ ನಾಯಕನಾಗಬಲ್ಲ ಇಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಹೇಳಿದರು. ಅವರು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆದ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಗಳ ವಿವಿಧ ಕ್ಲಬ್ ಗಳ ಉದ್ಘಾಟನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಘವೇಂದ್ರ ಶೇರುಗಾರ್ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳಾಡಿದರು. ವಿದ್ಯಾರ್ಥಿ ನಾಯಕ ಆರ್ಯನ್ ವಿ.ಕೆ ಉಪಸ್ಥಿತರಿದ್ದರು. ವಿವಿಧ ಕ್ಲಬ್ ಗಳ ವಿದ್ಯಾರ್ಥಿ ನಾಯಕರು ವಾರ್ಷಿಕ ವರದಿಯನ್ನು ವಾಚಿಸಿದರು. ಶಿಕ್ಷಕಿಯರಾದ ಸುಜಾತ ದೇವಾಡಿಗ ಮತ್ತು ಜಯಶ್ರೀ ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿದರು. ಸರಸ್ವತಿ ವಿದ್ಯಾಲಯ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಶಾಂತಿ ಡಿಕೋಸ್ಟ ವಂದಿಸಿದರು.




By
ForthFocus™