Friday, August 7, 2026
Friday, August 7, 2026

ಕಾಳಾವರ ಕಾಲೇಜು: ಗ್ರಂಥಪಾಲಕ ರವಿಚಂದ್ರರಿಗೆ ಬೀಳ್ಕೊಡುಗೆ

ಕಾಳಾವರ ಕಾಲೇಜು: ಗ್ರಂಥಪಾಲಕ ರವಿಚಂದ್ರರಿಗೆ ಬೀಳ್ಕೊಡುಗೆ

Date:

ಕೋಟೇಶ್ವರ, ಆ.5: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇಲ್ಲಿ ಕಳೆದ ಹದಿನೈದು ವರ್ಷಗಳಿಂದ ಗ್ರಂಥಪಾಲಕರಾಗಿ ಸೇವೆಗೈದು ವಯೋನಿವೃತ್ತರಾದ ರವಿಚಂದ್ರ ಹೆಚ್.ಎಸ್. ರವರಿಗೆ ಕಾಲೇಜಿನ ವತಿಯಿಂದ ಬೀಳ್ಕೊಡುಗೆ ಸಮಾರಂಭ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ಧ ಕಾಲೇಜಿನ ಪ್ರಾಂಶುಪಾಲ ನಾಗರಾಜ ವೈದ್ಯ ಎಂ. ಅವರ ಪ್ರಾಮಾಣಿಕ ಸೇವೆಯನ್ನು ಸ್ಮರಿಸಿದರು. ಹಿಂದೆ ಇದೇ ಸಂಸ್ಥೆಯಲ್ಲಿ ಪ್ರಾಂಶುಪಾಲರಾಗಿದ್ದ ಡಾ. ರಾಜೇಂದ್ರ ಎಸ್. ನಾಯಕ, ಪ್ರೊ. ರಾಮರಾಯ ಆಚಾರ್ಯ, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ಹಂಚಿಕೊಂಡರು. ಸಿಂಚನಾ ಮತ್ತು ತಂಡದವರು ಪ್ರಾರ್ಥಿಸಿದರು. ಶೃತಿ ಆಚಾರ್ಯ ಎನ್. ಕಾರ್ಯಕ್ರಮ ನಿರೂಪಿಸಿದರು. ನಿರಂಜನ ಶರ್ಮ ಗ್ರಂಥಪಾಲಕರ ಸೇವೆಯನ್ನು ಸಭೆಗೆ ಪರಿಚಯಿಸಿದರು. ಅಧ್ಯಾಪಕ ಕಾರ್ಯದರ್ಶಿ ಡಾ. ಉದಯ ಶೆಟ್ಟಿ ಕೆ. ಸಂಘಟಿಸಿದ ಈ ಸಮಾರಂಭದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸುಬ್ರಹ್ಮಣ್ಯ ಎ. ಸ್ವಾಗತಿಸಿ, ಡಾ. ಭಾಗೀರಥಿ ನಾಯ್ಕ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಧುಸೂದನ್ ಹೇರೂರು ದಂಪತಿಗಳಿಗೆ ಸನ್ಮಾನ

ಕಟಪಾಡಿ, ಆ.6: ಉಡುಪಿ ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ...

ತೋನ್ಸೆ (ಕೆಮ್ಮಣ್ಣು) ಗ್ರಾಮ ಪಂಚಾಯತ್: ಸಾರ್ವಜನಿಕರ ಅಹವಾಲು ಸ್ವೀಕಾರ

ಉಡುಪಿ, ಆ.6: ತೋನ್ಸೆ ಗ್ರಾಮ ಪಂಚಾಯತ್ ಕಚೇರಿಗೆ ಶಾಸಕ ಯಶ್ಪಾಲ್ ಸುವರ್ಣ...

ಆಗಸ್ಟ್ -ಸೆಪ್ಟಂಬರ್ ಮಾಹೆಯ ಪಡಿತರ ಒಂದೇ ಬಾರಿಗೆ ವಿತರಣೆ : ಪ್ರತ್ಯೇಕ ಬಯೋಮೆಟ್ರಿಕ್ ಕಡ್ಡಾಯ

ಉಡುಪಿ, ಆ.6: ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂತ್ಯೋದಯ ಮತ್ತು...

ತೆಂಕನಿಡಿಯೂರು ಕಾಲೇಜು: ಹೆಚ್ಐವಿ/ ಏಡ್ಸ್ ಜಾಗೃತಿ ಕಾರ್ಯಕ್ರಮ

ಮಲ್ಪೆ, ಆ.6: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...
error: Content is protected !!