Saturday, August 29, 2026
Saturday, August 29, 2026

ತೆಂಕನಿಡಿಯೂರು ಕಾಲೇಜು: ಹೆಚ್ಐವಿ/ ಏಡ್ಸ್ ಜಾಗೃತಿ ಕಾರ್ಯಕ್ರಮ

ತೆಂಕನಿಡಿಯೂರು ಕಾಲೇಜು: ಹೆಚ್ಐವಿ/ ಏಡ್ಸ್ ಜಾಗೃತಿ ಕಾರ್ಯಕ್ರಮ

Date:

ಮಲ್ಪೆ, ಆ.6: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್ ಹಾಗೂ ಮುನಿಯಾಲು ಆಯುರ್ವೇದ ವೈದ್ಯಕೀಯ ವಿಜ್ಞಾನ ಕಾಲೇಜು, ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ ನಡೆಯಿತು. ಮುನಿಯಾಲು ಆಯುರ್ವೇದ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಆಶಿತಾ. ಆರ್ ಎಚ್ಚರಿಕೆಯ ಜೀವನವೇ ಏಡ್ಸ್ ನಂತಹ ಮಾರಕ ರೋಗವನ್ನು ನಿಯಂತ್ರಿಸಲು ಸಾಧ್ಯ, ಯುವ ಜನತೆ ಹೆಚ್ಚು ಜಾಗೃತರಾಗಬೇಕು ಎಂಬ ಸಂದೇಶದೊಂದಿಗೆ, ಏಡ್ಸ್ ಎಂದರೇನು ಕಾರಣಗಳೇನು ಮತ್ತು ಪರಿಹಾರಗಳ ಕುರಿತಾದ ಸಮಗ್ರ ವಿವರಣೆ ನೀಡಿದರು. ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವ್ಕರ್ ಪರಿಶುದ್ಧ ಜೀವನ ನಡೆಸಿದ್ದಲ್ಲಿ, ಯಾವ ರೋಗ ರುಜಿನಗಳ ಬಗ್ಗೆ ಚಿಂತಿಸಬೇಕಾಗಿಲ್ಲ, ನೀತಿಯುತ ಬದುಕು ಸಾಮಾಜಿಕ ಸ್ವಾಸ್ಥ್ಯವನ್ನು ಸುಧಾರಿಸುತ್ತದೆ ಎಂದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಘು ನಾಯ್ಕ, ರೆಡ್ ಕ್ರಾಸ್ ಘಟಕ ಸಂಚಾಲಕರಾದ ಪ್ರಶಾಂತ್ ನೀಲಾವರ, ಮುನಿಯಾಲು ಆಯುರ್ವೇದ ಕಾಲೇಜಿನ ಎನ್ಎಸ್ಎಸ್ ಯೋಜನಾಧಿಕಾರಿಗಳಾದ ಡಾ. ನವನೀತ್, ಡಾ ನಿಧಿ, ಡಾ. ರಿತಿಕ, ಹಾಗೂ ತೆಂಕನಡಿಯೂರು ಕಾಲೇಜಿನ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಎನ್ ಎಸ್ ಎಸ್ ಘಟಕ ಎರಡರ ಯೋಜನಾಧಿಕಾರಿ, ಡಾ. ಜಯಮಂಗಳ ವಂದಿಸಿದರು. ಘಟಕ ಒಂದರ ಯೋಜನಾಧಿಕಾರಿ ಬಾಲರಾಜ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ 200 ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!