Saturday, August 8, 2026
Saturday, August 8, 2026

ಸ್ಥಳೀಯ ಆಹಾರ ಸಂಸ್ಕೃತಿಗೆ ಪ್ರೋತ್ಸಾಹ ನೀಡಿದ ರಿಲಯನ್ಸ್ ಸ್ಮಾರ್ಟ್ ಬಜಾರ್: ಜನಾರ್ದನ್ ಕೊಡವೂರು

ಸ್ಥಳೀಯ ಆಹಾರ ಸಂಸ್ಕೃತಿಗೆ ಪ್ರೋತ್ಸಾಹ ನೀಡಿದ ರಿಲಯನ್ಸ್ ಸ್ಮಾರ್ಟ್ ಬಜಾರ್: ಜನಾರ್ದನ್ ಕೊಡವೂರು

Date:

ಉಡುಪಿ, ಆ. 8: ಸ್ಥಳೀಯ ಆಹಾರ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ರಿಲಯನ್ಸ್ ಸ್ಮಾರ್ಟ್ ಬಜಾರ್ ವತಿಯಿಂದ ಆಯೋಜಿಸಲಾದ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಶ್ಲಾಘನೀಯವಾಗಿದೆ ಎಂದು ಪತ್ರಕರ್ತ ಜನಾರ್ದನ್ ಕೊಡವೂರು ಅಭಿಪ್ರಾಯಪಟ್ಟರು.

ಗುರುವಾರ ಉಡುಪಿಯ ರಿಲಯನ್ಸ್ ಸ್ಮಾರ್ಟ್ ಬಜಾರ್‌ನಲ್ಲಿ ನಡೆದ ಆಟಿಡೊಂಜಿ ದಿನದ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ನಗರ ಕೇಂದ್ರಿತ ವಾಣಿಜ್ಯ ಸಂಸ್ಥೆಯೊಂದು ತುಳುನಾಡಿನ ಸಾಂಪ್ರದಾಯಿಕ ಆಚರಣೆಗೆ ಆದ್ಯತೆ ನೀಡಿರುವುದು ಸಂತಸದ ವಿಷಯವಾಗಿದೆ ಎಂದರು.

ಒಂದೇ ಸೂರಿನಡಿ ಸ್ಥಳೀಯ 43 ಬಗೆಯ ಸಾಂಪ್ರದಾಯಿಕ ತಿಂಡಿ-ತಿನಿಸುಗಳಿಗೆ ಅವಕಾಶ ಕಲ್ಪಿಸಿರುವುದು ವಿಶೇಷ. ಅಲ್ಲದೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ಸ್ಪರ್ಧಿಗಳಿಗೆ ಸ್ಮರಣಿಕೆ ಹಾಗೂ ಬಹುಮಾನಗಳನ್ನು ನೀಡಿ, ಮಹಿಳೆಯರ ಪ್ರತಿಭೆ ಅನಾವರಣಗೊಳ್ಳಲು ಉತ್ತಮ ವೇದಿಕೆ ಒದಗಿಸಿರುವುದು ಪ್ರಶಂಸನೀಯ ಕಾರ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ರಂಜನಿ ವಸಂತ್ ಹಾಗು ಸಹನಾ ಬಲ್ಲಾಳ್ ಸಹಕರಿಸಿದರು. ರಿಲೈನ್ಸ್ ಸ್ಮಾರ್ಟ್ ಬಜಾರ್ ಮುಖ್ಯಸ್ಥ ರಾಘವೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿ, ಅಗೋಸ್ಟ್ 12 ರಿಂದ 16ರವರೆಗೆ ‘ಫುಲ್ ಪೈಸಾ ವಸೂಲ್ ಸೇಲ್’ ಪ್ರಾರಂಭವಾಗುವುದು ಎಂದರು. ಜ್ಯೋತಿ ಶೇಟ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯೋಗ ಸ್ಪರ್ಧೆಯಲ್ಲಿ ಪ್ರೇರಣಾ ಸಾನ್ವಿ ಸಾಧನೆ

ಉಡುಪಿ, ಆ.8: ಬ್ರಹ್ಮಾವರದಲ್ಲಿ ನಡೆದ ತಾಲ್ಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆರ್ಟಿಸ್ಟಿಕ್...

ಶ್ರೀ ಕೃಷ್ಣ ಮಠಕ್ಕೆ ವಿಶ್ವ ಹಿಂದೂ ಪರಿಷದ್ ಅಂತರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಭೇಟಿ

ಉಡುಪಿ, ಆ.8: ಶ್ರೀ ಕೃಷ್ಣ ಮಠಕ್ಕೆ ವಿಶ್ವ ಹಿಂದೂ ಪರಿಷದ್ ಅಂತರಾಷ್ಟ್ರೀಯ...

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

  ಮಣಿಪಾಲ, ಆ.8: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವಿಶ್ವವಿದ್ಯಾಲಯ...
error: Content is protected !!