ಕಾಪು, ಆ.10: ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಜತೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದು, ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು. ದೇವಳದ ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ವತಿಯಿಂದ ಗೌರವಿಸಲಾಯಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಗ್ರಾಮ ಸಮಿತಿ ಪ್ರಧಾನ ಸಂಚಾಲಕ ಅರುಣ್ ಶೆಟ್ಟಿ ಪಾದೂರು, ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರ ಮಲ್ಲಾರ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.




By
ForthFocus™