ಉಡುಪಿ, ಆ.10: ನೆನೆಗುದಿಗೆ ಬಿದ್ದಿರುವ ಉಡುಪಿ ಜಿಲ್ಲೆಯ ವಾರಾಹಿ ಯೋಜನೆಗೆ 17.49 ಹೆಕ್ಟರ್ ಅರಣ್ಯ ಭೂಮಿ ಬಳಸಿಕೊಳ್ಳಲು ಅನುಮತಿ ನೀಡುವಂತೆ ಕೋರಿಕೆ ಸಲ್ಲಿಸಲು ಕೇಂದ್ರ ಅರಣ್ಯ ಸಚಿವಾಲಯಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿ ಇಲಾಖೆಯ ಅರಣ್ಯ ಮಹಾನಿರೀಕ್ಷಕ ರಘುಪ್ರಸಾದ್ ರವರನ್ನು ಭೇಟಿ ಮಾಡಿ ಈ ಯೋಜನೆಯ ಬಹುತೇಕ ಕಾಮಗಾರಿಗಳು ಮುಗಿದಿದ್ದು, ಮೀಸಲು ಅರಣ್ಯ ಪ್ರದೇಶದ 12.95 ಕಿ.ಮೀ ಉದ್ದದ ಕಾಲುವೆ ನಿರ್ಮಾಣದ ಕೆಲಸ ಮಾತ್ರ ಬಾಕಿ ಉಳಿದಿದ್ದು ಈ ಕಾಮಗಾರಿಗೆ 17.49 ಹೆಕ್ಟರ್ ಅರಣ್ಯ ಭೂಮಿಯ ಅವಶ್ಯಕತೆ ಇದೆ. ಈ ಯೋಜನೆ ಪೂರ್ಣಗೊಂಡರೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ 2723 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರಕಲಿದೆ. ಅಲ್ಲದೆ, ಜಿಲ್ಲೆಯ ಜನರಿಗೆ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ಸಂಸದ ಕೋಟ ವಿವರಿಸಿದರು.
ಕೇಂದ್ರ ಅರಣ್ಯ ಇಲಾಖೆಯ ಮಹಾನಿರೀಕ್ಷಕ ರಘುಪ್ರಸಾದ್ ಪ್ರತಿಕ್ರಿಯಿಸಿ ಕಳೆದ 4 ವರ್ಷಗಳಿಂದ ಈ ಕಡತ ವಿಲೇಯಲ್ಲಿದ್ದು ತಕ್ಷಣ ರಾಜ್ಯ ಸರ್ಕಾರದಿಂದ ವರದಿ ತರಿಸಿಕೊಂಡು ಅನುಮೋದನೆ ನೀಡುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದರು.




By
ForthFocus™