Tuesday, August 11, 2026
Tuesday, August 11, 2026

ವಾರಾಹಿ ಯೋಜನೆ ಬಗ್ಗೆ ಕೇಂದ್ರ ಅರಣ್ಯ ಇಲಾಖೆಗೆ ಸಂಸದ ಕೋಟ ಭೇಟಿ

ವಾರಾಹಿ ಯೋಜನೆ ಬಗ್ಗೆ ಕೇಂದ್ರ ಅರಣ್ಯ ಇಲಾಖೆಗೆ ಸಂಸದ ಕೋಟ ಭೇಟಿ

Date:

ಉಡುಪಿ, ಆ.10: ನೆನೆಗುದಿಗೆ ಬಿದ್ದಿರುವ ಉಡುಪಿ ಜಿಲ್ಲೆಯ ವಾರಾಹಿ ಯೋಜನೆಗೆ 17.49 ಹೆಕ್ಟರ್ ಅರಣ್ಯ ಭೂಮಿ ಬಳಸಿಕೊಳ್ಳಲು ಅನುಮತಿ ನೀಡುವಂತೆ ಕೋರಿಕೆ ಸಲ್ಲಿಸಲು ಕೇಂದ್ರ ಅರಣ್ಯ ಸಚಿವಾಲಯಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿ ಇಲಾಖೆಯ ಅರಣ್ಯ ಮಹಾನಿರೀಕ್ಷಕ ರಘುಪ್ರಸಾದ್ ರವರನ್ನು ಭೇಟಿ ಮಾಡಿ ಈ ಯೋಜನೆಯ ಬಹುತೇಕ ಕಾಮಗಾರಿಗಳು ಮುಗಿದಿದ್ದು, ಮೀಸಲು ಅರಣ್ಯ ಪ್ರದೇಶದ 12.95 ಕಿ.ಮೀ ಉದ್ದದ ಕಾಲುವೆ ನಿರ್ಮಾಣದ ಕೆಲಸ ಮಾತ್ರ ಬಾಕಿ ಉಳಿದಿದ್ದು ಈ ಕಾಮಗಾರಿಗೆ 17.49 ಹೆಕ್ಟರ್ ಅರಣ್ಯ ಭೂಮಿಯ ಅವಶ್ಯಕತೆ ಇದೆ. ಈ ಯೋಜನೆ ಪೂರ್ಣಗೊಂಡರೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ 2723 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರಕಲಿದೆ. ಅಲ್ಲದೆ, ಜಿಲ್ಲೆಯ ಜನರಿಗೆ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ಸಂಸದ ಕೋಟ ವಿವರಿಸಿದರು.

ಕೇಂದ್ರ ಅರಣ್ಯ ಇಲಾಖೆಯ ಮಹಾನಿರೀಕ್ಷಕ ರಘುಪ್ರಸಾದ್ ಪ್ರತಿಕ್ರಿಯಿಸಿ ಕಳೆದ 4 ವರ್ಷಗಳಿಂದ ಈ ಕಡತ ವಿಲೇಯಲ್ಲಿದ್ದು ತಕ್ಷಣ ರಾಜ್ಯ ಸರ್ಕಾರದಿಂದ ವರದಿ ತರಿಸಿಕೊಂಡು ಅನುಮೋದನೆ ನೀಡುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆ. 12 ರಂದು ಮಣಿಪಾಲದಲ್ಲಿ ತಿರಂಗಾ ಯಾತ್ರೆ ದೇಶಕ್ಕಾಗಿ ದೇಶಭಕ್ತರ ನಡಿಗೆ ಕಾರ್ಯಕ್ರಮ

ಉಡುಪಿ, ಆ.10: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿ ಭಾಗದ...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ

ಕಾಪು, ಆ.10: ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಕಾಪು...

ಜ್ಯೋತಿ ಸಾಲಿಗ್ರಾಮ ಇವರಿಗೆ ಪಂಚವರ್ಣದ ‘ಆಸಾಡಿ ಒಡ್ರ್ ಪುರಸ್ಕಾರ’

ಕೋಟ, ಆ.10: ಪ್ರತಿಯೊಬ್ಬರೂ ತಮ್ಮ ನೆಲಮೂಲದ ಭಾಷೆಯನ್ನು ಹೃದಯದ ಭಾಷೆಯನ್ನಾಗಿ ಮಾಡಿಕೊಂಡಾಗ...

ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

ಕುಂದಾಪುರ, ಆ.9: ಸರಕಾರಿ ಪದವಿಪೂರ್ವ ಕಾಲೇಜು ನಾವುಂದದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ...
error: Content is protected !!