Wednesday, August 12, 2026
Wednesday, August 12, 2026

ವಿದ್ಯಾರ್ಜನೆ ಸಂದರ್ಭದಲ್ಲಿ ಸಾಮರಸ್ಯ ಮುಖ್ಯ: ಗೋಪಾಲಕೃಷ್ಣ ಜಿ. ಬಿ

ವಿದ್ಯಾರ್ಜನೆ ಸಂದರ್ಭದಲ್ಲಿ ಸಾಮರಸ್ಯ ಮುಖ್ಯ: ಗೋಪಾಲಕೃಷ್ಣ ಜಿ. ಬಿ

Date:

ಕುಂದಾಪುರ, ಆ.11: ಶೈಕ್ಷಣಿಕ ವಾತಾವರಣದಲ್ಲಿ ವಿದ್ಯಾರ್ಜನೆ ಮಾಡುವ ಸಂದರ್ಭದಲ್ಲಿ ಸಾಮರಸ್ಯ ಬಹಳ ಮುಖ್ಯ. ಪ್ರಥಮ ವರ್ಷದ ಪದವಿಗೆ ಸೇರಿದ ನಿಮಗೆ ಭವಿಷ್ಯದಲ್ಲಿ ಜೀವನಕ್ಕೆ ಅಗತ್ಯವಾದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ. ಬದುಕಿನ ಕೊನೆಯವರೆಗೆ ಬರುವ ಶಿಕ್ಷಣವನ್ನು ಕಲಿತು ಬದುಕಿರಿ ಎಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ. ಬಿ. ಹೇಳಿದರು.

ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಪ್ರಥಮ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಫ್ರೆಶರ್ಸ್ ಡೇ’ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ವಿಕಾಸ್ ಶೆಟ್ಟಿ ಸ್ವಾಗತಿಸಿ, ಎಸ್ಕ್ಯೂಎಸಿ ಪ್ರತಿನಿಧಿ ಖುಷಿ ಶೆಟ್ಟಿ ವಂದಿಸಿ, ಸಾಂಸ್ಕೃತಿಕ ಕಾರ್ಯದರ್ಶಿ ಅಭಿಷೇಕ್ ಪ್ರಾರ್ಥಿಸಿ, ಸಿಂಚನ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮನ್ನು ಶರಣ್ಯ ಶೆಟ್ಟಿ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಂತುಹುಳು ನಿವಾರಣಾ ಮಾತ್ರೆ ಸೇವಿಸಿ ಆರೋಗ್ಯಯುತ ಜೀವನ ನಡೆಸಿ: ಶಾಸಕ ಯಶ್‌ಪಾಲ್ ಎ ಸುವರ್ಣ ಕರೆ

ಉಡುಪಿ, ಆ.11: ಮಕ್ಕಳಲ್ಲಿ ಜಂತುಹುಳುಗಳ ಭಾದೆಯಿಂದ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಉಂಟಾಗಿ...

ಜೈ ಕುಂದಾಪ್ರ ಸೇವಾ ಟ್ರಸ್ಟ್ ರಾಜ್ಯಕ್ಕೆ ಮಾದರಿ: ಭಾಸ್ಕರ್ ಸ್ವಾಮಿ

ಕೋಟ, ಆ.11: ಜೈ ಕುಂದಾಪ್ರ ಸೇವಾ ಟ್ರಸ್ಟ್ ಯುವ ಮನಸ್ಸುಗಳಿಗೆ ಸ್ಫೂರ್ತಿ,...

ಆ. 12 ರಂದು ಮಣಿಪಾಲದಲ್ಲಿ ತಿರಂಗಾ ಯಾತ್ರೆ ದೇಶಕ್ಕಾಗಿ ದೇಶಭಕ್ತರ ನಡಿಗೆ ಕಾರ್ಯಕ್ರಮ

ಉಡುಪಿ, ಆ.10: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿ ಭಾಗದ...

ವಾರಾಹಿ ಯೋಜನೆ ಬಗ್ಗೆ ಕೇಂದ್ರ ಅರಣ್ಯ ಇಲಾಖೆಗೆ ಸಂಸದ ಕೋಟ ಭೇಟಿ

ಉಡುಪಿ, ಆ.10: ನೆನೆಗುದಿಗೆ ಬಿದ್ದಿರುವ ಉಡುಪಿ ಜಿಲ್ಲೆಯ ವಾರಾಹಿ ಯೋಜನೆಗೆ 17.49...
error: Content is protected !!