Friday, September 20, 2024
Friday, September 20, 2024

ಸ್ಪರ್ಧಾತ್ಮಕ ಯುಗದಲ್ಲಿ ಜೀವನ ಕೌಶಲ್ಯಗಳ ಪಾತ್ರ ಮಹತ್ವದ್ದಾಗಿದೆ: ಡಾ. ಉದಯ ಶೆಟ್ಟಿ ಕೆ

ಸ್ಪರ್ಧಾತ್ಮಕ ಯುಗದಲ್ಲಿ ಜೀವನ ಕೌಶಲ್ಯಗಳ ಪಾತ್ರ ಮಹತ್ವದ್ದಾಗಿದೆ: ಡಾ. ಉದಯ ಶೆಟ್ಟಿ ಕೆ

Date:

ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದಲ್ಲಿ ಜೀವನ ಕೌಶಲ್ಯಗಳು ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪಾತ್ರರಾದ ಡಾ. ಉದಯ ಶೆಟ್ಟಿ ಕೆ. ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯೆಯೊಂದಿಗೆ ಜೀವನ ಕೌಶಲ್ಯಗಳು ಅತೀ ಮಹತ್ವದ್ದಾಗಿದೆ.
ಸಮಾಜದಲ್ಲಿ ಧೈರ್ಯಯುತವಾಗಿ ಬದುಕಲು ಜೀವನ ಕೌಶಲ್ಯಗಳು ಸಹಕಾರಿಯಾಗಿದೆ. ಜೀವನದಲ್ಲಿ ವಿಫಲವಾದಾಗಲೂ ಮುಂದಿನ ಬದುಕು ರೂಪಿಸಲು ಜೀವನ ಕೌಶಲ್ಯಗಳು ಸಹಕರಿಸುತ್ತದೆ ಎಂದು ಜೀವನ ಕೌಶಲ್ಯಗಳನ್ನು ಶಿಬಿರಾರ್ಥಿಗಳಿಗೆ ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಜಯಪ್ರಕಾಶ್ ಶೆಟ್ಟಿ ಹೆಚ್ ವಹಿಸಿದ್ದರು. ಎನ್.ಎಸ್.ಎಸ್. ಯೋಜನಾಧಿಕಾರಿಗಳಾದ ಸುಷ್ಮಾ ಟಿ. ಹಾಗೂ ಡಾ. ಮಹೇಶ್ ಕುಮಾರ್ ಕೆ.ಇ. ಉಪಸ್ಥಿತರಿದ್ದರು. ಕಿಶೋರ್ ಸ್ವಾಗತಿಸಿ, ದಿವ್ಯಾ ವಂದಿಸಿದರು. ಶಿಬಿರಾರ್ಥಿ ಅನ್ವಿತಾ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!