ಕಟಪಾಡಿ, ಆ.12: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಬಿರುವೆರ್ ಕಾಪು ಸೇವಾ ಸಮಿತಿ ಸಹಭಾಗಿತ್ವದಲ್ಲಿ ಸಾರ್ವಜನಿಕರಿಗೆ ಹಾಳೆ ಮರದ ತೊಗಟೆಯಿಂದ ತಯಾರಿಸಿದ ಆಟಿ ಕಷಾಯ ಮತ್ತು ಮೆಂತೆ ಗಂಜಿ ವಿತರಣಾ ಕಾರ್ಯಕ್ರಮ ನಡೆಯಿತು. ಶ್ರೀ ಸಾಯಿ ಈಶ್ವರ್ ಗುರೂಜಿ ಮಾತನಾಡಿ, ಪಾಲೆ ಕಷಾಯ ಆರೋಗ್ಯಕ್ಕೆ ಉತ್ತಮವಾಗಿದೆ. ಸೂರ್ಯೋದಯಕ್ಕಿಂತ ಮೊದಲು ಅದನ್ನು ಸೇವಿಸಿದಲ್ಲಿ ಅನೇಕ ರೋಗರುಜಿನೆಗಳು ಮಾಯವಾಗಲು ಸಾಧ್ಯ. ಶ್ರೀ ಕ್ಷೇತ್ರದ ವತಿಯಿಂದ ಭಕ್ತರಿಗೆ ಇದನ್ನು ಉಚಿತವಾಗಿ ನೀಡುವ ಕಾರ್ಯ ಮಾಡಲಾಗುತ್ತಿದೆ ಎಂದರು. ವಿಘ್ನೇಶ್ ನೀಲಾವರ, ಸತೀಶ್ ದೇವಾಡಿಗ, ರಾಘವೇಂದ್ರ ಪ್ರಭು ಕರ್ವಾಲು, ಮುಂತಾದವರು ಉಪಸ್ಥಿತರಿದ್ದರು.
ಕಟಪಾಡಿ: ಆಟಿ ಕಷಾಯ ಮತ್ತು ಮೆಂತೆ ಗಂಜಿ ವಿತರಣೆ
ಕಟಪಾಡಿ: ಆಟಿ ಕಷಾಯ ಮತ್ತು ಮೆಂತೆ ಗಂಜಿ ವಿತರಣೆ
Date:




By
ForthFocus™