Wednesday, August 12, 2026
Wednesday, August 12, 2026

ಕಟಪಾಡಿ: ಆಟಿ ಕಷಾಯ ಮತ್ತು ಮೆಂತೆ ಗಂಜಿ ವಿತರಣೆ

ಕಟಪಾಡಿ: ಆಟಿ ಕಷಾಯ ಮತ್ತು ಮೆಂತೆ ಗಂಜಿ ವಿತರಣೆ

Date:

ಕಟಪಾಡಿ, ಆ.12: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಬಿರುವೆರ್ ಕಾಪು ಸೇವಾ ಸಮಿತಿ ಸಹಭಾಗಿತ್ವದಲ್ಲಿ ಸಾರ್ವಜನಿಕರಿಗೆ ಹಾಳೆ ಮರದ ತೊಗಟೆಯಿಂದ ತಯಾರಿಸಿದ ಆಟಿ ಕಷಾಯ ಮತ್ತು ಮೆಂತೆ ಗಂಜಿ ವಿತರಣಾ ಕಾರ್ಯಕ್ರಮ ನಡೆಯಿತು. ಶ್ರೀ ಸಾಯಿ ಈಶ್ವರ್ ಗುರೂಜಿ ಮಾತನಾಡಿ, ಪಾಲೆ ಕಷಾಯ ಆರೋಗ್ಯಕ್ಕೆ ಉತ್ತಮವಾಗಿದೆ. ಸೂರ್ಯೋದಯಕ್ಕಿಂತ ಮೊದಲು ಅದನ್ನು ಸೇವಿಸಿದಲ್ಲಿ ಅನೇಕ ರೋಗರುಜಿನೆಗಳು ಮಾಯವಾಗಲು ಸಾಧ್ಯ. ಶ್ರೀ ಕ್ಷೇತ್ರದ ವತಿಯಿಂದ ಭಕ್ತರಿಗೆ ಇದನ್ನು ಉಚಿತವಾಗಿ ನೀಡುವ ಕಾರ್ಯ ಮಾಡಲಾಗುತ್ತಿದೆ ಎಂದರು. ವಿಘ್ನೇಶ್ ನೀಲಾವರ, ಸತೀಶ್ ದೇವಾಡಿಗ, ರಾಘವೇಂದ್ರ ಪ್ರಭು ಕರ್ವಾಲು, ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆ.14: ಆಭರಣ ಮೋಟಾರ್ಸ್ ನಲ್ಲಿ ನೇರ ಸಂದರ್ಶನ

ಉಡುಪಿ, ಆ.11: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್...

ಜಂತುಹುಳು ನಿವಾರಣಾ ಮಾತ್ರೆ ಸೇವಿಸಿ ಆರೋಗ್ಯಯುತ ಜೀವನ ನಡೆಸಿ: ಶಾಸಕ ಯಶ್‌ಪಾಲ್ ಎ ಸುವರ್ಣ ಕರೆ

ಉಡುಪಿ, ಆ.11: ಮಕ್ಕಳಲ್ಲಿ ಜಂತುಹುಳುಗಳ ಭಾದೆಯಿಂದ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಉಂಟಾಗಿ...

ಜೈ ಕುಂದಾಪ್ರ ಸೇವಾ ಟ್ರಸ್ಟ್ ರಾಜ್ಯಕ್ಕೆ ಮಾದರಿ: ಭಾಸ್ಕರ್ ಸ್ವಾಮಿ

ಕೋಟ, ಆ.11: ಜೈ ಕುಂದಾಪ್ರ ಸೇವಾ ಟ್ರಸ್ಟ್ ಯುವ ಮನಸ್ಸುಗಳಿಗೆ ಸ್ಫೂರ್ತಿ,...

ವಿದ್ಯಾರ್ಜನೆ ಸಂದರ್ಭದಲ್ಲಿ ಸಾಮರಸ್ಯ ಮುಖ್ಯ: ಗೋಪಾಲಕೃಷ್ಣ ಜಿ. ಬಿ

ಕುಂದಾಪುರ, ಆ.11: ಶೈಕ್ಷಣಿಕ ವಾತಾವರಣದಲ್ಲಿ ವಿದ್ಯಾರ್ಜನೆ ಮಾಡುವ ಸಂದರ್ಭದಲ್ಲಿ ಸಾಮರಸ್ಯ ಬಹಳ...
error: Content is protected !!